ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಶಿಕ್ಷಕರ ಮೇಲೆ ಹಲ್ಲೆ–ಬೆದರಿಕೆ; ಯುವಕನ ವಿರುದ್ಧ ಪ್ರಕರಣ ದಾಖಲು

Last Updated 19 ಮಾರ್ಚ್ 2023, 15:41 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ಊರಮ್ಮ ಬಯಲಿನ ಕಟ್ಟಾ ಕೃಷ್ಣ ವೇಣಮ್ಮ ಶಾಲೆಯ ಶಿಕ್ಷಕರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮುಖ್ಯಶಿಕ್ಷಕರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಯುವಕನ ವಿರುದ್ಧ ನಗರದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ನಗರದ ಊರಮ್ಮ ಬಯಲಿನ ರಾಮು ಹನುಮಂತಪ್ಪ ವಿರುದ್ಧ ಐಪಿಸಿ 186, 353, 448, 504, 506 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ‘ರಾಮು ಪದೇ ಪದೇ ಶಾಲೆಗೆ ಬಂದು ಶಿಕ್ಷಕರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದ.

ಮಾ. 10ರಂದು ಮಧ್ಯಾಹ್ನ 3.30ರ ಸಮಯದಲ್ಲಿ ಶಾಲೆಯ ಹತ್ತನೇ ತರಗತಿ ಕೊಠಡಿಯೊಳಗೆ ಪ್ರವೇಶಿಸಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಶಿಕ್ಷಕರ ಕೆಲಸಕ್ಕೆ ಅಡ್ಡಿಪಡಿಸಿದ್ದಾನೆ.

ಕೊಠಡಿಯಿಂದ ಹೊರಗೆ ಕಳಿಸುವಾಗ ಕೊರಳಪಟ್ಟಿ ಹಿಡಿದು ಮುಖ್ಯಶಿಕ್ಷಕರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾನೆ ಎಂಬ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್‌ಐ ಆರ್‌. ಪದ್ಮಾವತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT