ಪಟ್ಟು ಹಿಡಿದು ಜಿಲ್ಲೆ ಮಾಡಿಸಿದ್ದ ಮಾಜಿಸಚಿವ ಆನಂದ್ ಸಿಂಗ್ ಅವರ ಮಗ, ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಅವರು ಜಿಲ್ಲಾ ಕೇಂದ್ರವಾದ ವಿಜಯನಗರ (ಹೊಸಪೇಟೆಯಲ್ಲಿ) ಕ್ಷೇತ್ರದಲ್ಲಿ ಭಾರಿ ಅಂತರದಿಂದ ಸೋಲು ಕಂಡಿದ್ದಾರೆ. ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಹೂವಿನಹಡಗಲಿಯಲ್ಲಿ ಮಾತ್ರ ಬಿಜೆಪಿ ಜಯ ಗಳಿಸಿದೆ. ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ನಿಂದ ಬಿಜೆಪಿ ಸೇರಿದ್ದ ಕೃಷ್ಣ ನಾಯ್ಕ ಅವರು ಈ ಹಿಂದಿನ ಎರಡು ಚುನಾವಣೆಯಲ್ಲಿ ಜಯ ಕಂಡಿದ್ದ ಪಿ.ಟಿ. ಪರಮೇಶ್ವರ ನಾಯ್ಕ ಅವರನ್ನು ಸೋಲಿಸಿದ್ದಾರೆ.
ಹಗರಿಬೊಮ್ಮನಹಳ್ಳಿಯಲ್ಲಿ ಜೆಡಿಎಸ್ನಿಂದ ಕೆ. ನೇಮರಾಜ ನಾಯ್ಕ ಗೆಲುವು ಕಂಡಿದ್ದಾರೆ. ಕೊನೆಯ ಕ್ಷಣದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಕೂಡ್ಲಿಗಿಯಲ್ಲಿ ಕಾಂಗ್ರೆಸ್ನ ಡಾ. ಎನ್.ಟಿ. ಶ್ರೀನಿವಾಸ್ ಜಯ ಸಾಧಿಸಿದ್ದಾರೆ.
ಪಕ್ಷಗಳ ಬಲಾಬಲ ಹೀಗಿದೆ
05–ಒಟ್ಟು ಕ್ಷೇತ್ರಗಳು
02–ಕಾಂಗ್ರೆಸ್
01–ಬಿಜೆಪಿ
01–ಜೆಡಿಎಸ್
01–ಪಕ್ಷೇತರ