<p><strong>ಹೊಸಪೇಟೆ</strong>: ನಗರದ ಜಂಬುನಾಥ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯಲ್ಲಿ ಆಯುರ್ವೇದ ಚಿಕಿತ್ಸೆಗಾಗಿ 25 ಹಾಸಿಗೆಗಳನ್ನು ಕಾಯ್ದಿರಿಸುವ ಚಿಂತನೆ ನಡೆದಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಅವರು ಭಾನುವಾರ ಇಲ್ಲಿ ಆಯುಷ್ ಫೆಡರೇಷನ್ ಆಫ್ ಇಂಡಿಯಾ (ಎಎಫ್ಐ) ಹೊಸಪೇಟೆ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಟ್ಟದ ಅಗ್ನಿಕರ್ಮ, ವಿದ್ಧ ಕರ್ಮ ಚಿಕಿತ್ಸೆ ಕುರಿತ ಕಾರ್ಯಾಗಾರ ‘ಬೋದ್ಧವ್ಯ–2025’ ಉದ್ಘಾಟಿಸಿ ಮಾತನಾಡಿದರು.</p>.<p>ಪುಣೆಯ ಡಾ.ಚಂದ್ರಕುಮಾರ್ ದೇಶಮುಖ್ ಅವರು ಅಗ್ನಿ ಕರ್ಮ ಮತ್ತು ವಿದ್ಧ ಕರ್ಮದ ಬಗ್ಗೆ ವಿಶೇಷ ಮಾಹಿತಿ ನೀಡಿದರು. 50ಕ್ಕೂ ಹೆಚ್ಚು ರೋಗಿಗಳಿಗೆ ಈ ಚಿಕಿತ್ಸಾ ವಿಧಾನಗಳ ಮೂಲಕ ತಕ್ಷಣದ ಪರಿಹಾರ ನೀಡಿದರು.</p>.<p>ರಾಜೀವ್ ಗಾಂಧಿ ವೈದ್ಯವಿಜ್ಞಾನ ವಿಶ್ವವಿದ್ಯಾಲಯದ ಬಿಒಎಸ್ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ್, ಸ್ವಾತಿ ಹೋಟೆಲ್ ಗುಂಪಿನ ಮಾಲೀಕ ಅಭಿಷೇಕ್ ಕೆ.ಎಸ್., ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೀಂದ್ರ, ಎಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಬಿ.ವಿ.ಭಟ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ನಗರದ ಜಂಬುನಾಥ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯಲ್ಲಿ ಆಯುರ್ವೇದ ಚಿಕಿತ್ಸೆಗಾಗಿ 25 ಹಾಸಿಗೆಗಳನ್ನು ಕಾಯ್ದಿರಿಸುವ ಚಿಂತನೆ ನಡೆದಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಅವರು ಭಾನುವಾರ ಇಲ್ಲಿ ಆಯುಷ್ ಫೆಡರೇಷನ್ ಆಫ್ ಇಂಡಿಯಾ (ಎಎಫ್ಐ) ಹೊಸಪೇಟೆ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಟ್ಟದ ಅಗ್ನಿಕರ್ಮ, ವಿದ್ಧ ಕರ್ಮ ಚಿಕಿತ್ಸೆ ಕುರಿತ ಕಾರ್ಯಾಗಾರ ‘ಬೋದ್ಧವ್ಯ–2025’ ಉದ್ಘಾಟಿಸಿ ಮಾತನಾಡಿದರು.</p>.<p>ಪುಣೆಯ ಡಾ.ಚಂದ್ರಕುಮಾರ್ ದೇಶಮುಖ್ ಅವರು ಅಗ್ನಿ ಕರ್ಮ ಮತ್ತು ವಿದ್ಧ ಕರ್ಮದ ಬಗ್ಗೆ ವಿಶೇಷ ಮಾಹಿತಿ ನೀಡಿದರು. 50ಕ್ಕೂ ಹೆಚ್ಚು ರೋಗಿಗಳಿಗೆ ಈ ಚಿಕಿತ್ಸಾ ವಿಧಾನಗಳ ಮೂಲಕ ತಕ್ಷಣದ ಪರಿಹಾರ ನೀಡಿದರು.</p>.<p>ರಾಜೀವ್ ಗಾಂಧಿ ವೈದ್ಯವಿಜ್ಞಾನ ವಿಶ್ವವಿದ್ಯಾಲಯದ ಬಿಒಎಸ್ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ್, ಸ್ವಾತಿ ಹೋಟೆಲ್ ಗುಂಪಿನ ಮಾಲೀಕ ಅಭಿಷೇಕ್ ಕೆ.ಎಸ್., ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೀಂದ್ರ, ಎಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಬಿ.ವಿ.ಭಟ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>