<p><strong>ಹೊಸಪೇಟೆ (ವಿಜಯನಗರ):</strong> ನೆಹರೂ ಕಾಲೊನಿಯಲ್ಲಿರುವ ನಗರದ ಏಕೈಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ರವ್ಯಕಲಶ ಮತ್ತು ಕುಂಭಾಭಿಷೇಕ ಶನಿವಾರ ನಡೆದಿದ್ದು, ನೂರಾರು ಮಂದಿ ಸ್ವಾಮಿಯ ಶಿಖರಕ್ಕೆ ಕಲಶಾಭಿಷೇಕ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು.</p>.<p>ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದಂತೆ ದೇವಸ್ಥಾನದಲ್ಲಿ ಬ್ರಹ್ಮಕಲಶ ಆಗಬೇಕು ಎಂಬ ಸೂಚನೆಯಂತೆ ಡಿ.21ರಿಂದಲೇ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದವು. ಡಿ.23ರಂದು ಮಾಂಗಲ್ಯ ಪೂಜೆ, ಸ್ವಯಂವರ ಹೋಮ, 24ರಂದು ಸರ್ಪಬಲಿ ಸೇವೆ, ಆಶ್ಲೇಷ ಬಲಿ, 25ರಂದು ಭಗವತೀ ಸೇವೆ ನಡೆದಿತ್ತು. </p>.<p>ಶನಿವಾರ ದೇವಸ್ಥಾನದದಲ್ಲಿ ವರ್ಷಂಪ್ರತಿ ನಡೆಯುವಂತೆ ಮಂಡಲ ಪೂಜೆಯೂ ನಡೆಯಿತು. ಅದೇ ಸಂದರ್ಭದಲ್ಲಿ ದ್ರವ್ಯಕಲಶ ಮತ್ತು ಕುಂಭಾಭಿಷೇಕ ನಡೆಯುವ ಮೂಲಕ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸಂಜೆ ಪಟೇಲ್ನಗರದ ಗೋಪಾಲಕೃಷ್ಣ ದೇವಸ್ಥಾನದಿಂದ ಅಯ್ಯಪ್ಪ ಗುಡಿಯವರೆಗೆ ಅಯ್ಯಪ್ಪ ಸ್ವಾಮಿಯ ಶೋಭಾಯಾತ್ರೆ ನಡೆಯಿತು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಇ.ಎನ್.ಶಂಕರನ್ ನಂಬೂದಿರಿ ಅವರ ನೇತೃತ್ವದಲ್ಲಿ ಎಲ್ಲ ಧಾರ್ಮಿಕ ವಿಧಿವಿಧಾನಗಳು ನಡೆದವು. ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಭೂಪಾಳ್ ಪ್ರಹ್ಲಾದ್, ಖಜಾಂಚಿ ರವೀಂದ್ರನಾಥ ಗುಪ್ತ, ಸದಸ್ಯರಾದ ರಾಜೇಶ್, ಬರಡೆ ನಾರಾಯಣ, ಶಿವಪ್ರಸಾದ್, ಗಣೇಶ್ ಹಾಗೂ ಅನೇಕ ಮಂದಿ ದಾನಿಗಳು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನೆಹರೂ ಕಾಲೊನಿಯಲ್ಲಿರುವ ನಗರದ ಏಕೈಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ರವ್ಯಕಲಶ ಮತ್ತು ಕುಂಭಾಭಿಷೇಕ ಶನಿವಾರ ನಡೆದಿದ್ದು, ನೂರಾರು ಮಂದಿ ಸ್ವಾಮಿಯ ಶಿಖರಕ್ಕೆ ಕಲಶಾಭಿಷೇಕ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು.</p>.<p>ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದಂತೆ ದೇವಸ್ಥಾನದಲ್ಲಿ ಬ್ರಹ್ಮಕಲಶ ಆಗಬೇಕು ಎಂಬ ಸೂಚನೆಯಂತೆ ಡಿ.21ರಿಂದಲೇ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದವು. ಡಿ.23ರಂದು ಮಾಂಗಲ್ಯ ಪೂಜೆ, ಸ್ವಯಂವರ ಹೋಮ, 24ರಂದು ಸರ್ಪಬಲಿ ಸೇವೆ, ಆಶ್ಲೇಷ ಬಲಿ, 25ರಂದು ಭಗವತೀ ಸೇವೆ ನಡೆದಿತ್ತು. </p>.<p>ಶನಿವಾರ ದೇವಸ್ಥಾನದದಲ್ಲಿ ವರ್ಷಂಪ್ರತಿ ನಡೆಯುವಂತೆ ಮಂಡಲ ಪೂಜೆಯೂ ನಡೆಯಿತು. ಅದೇ ಸಂದರ್ಭದಲ್ಲಿ ದ್ರವ್ಯಕಲಶ ಮತ್ತು ಕುಂಭಾಭಿಷೇಕ ನಡೆಯುವ ಮೂಲಕ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸಂಜೆ ಪಟೇಲ್ನಗರದ ಗೋಪಾಲಕೃಷ್ಣ ದೇವಸ್ಥಾನದಿಂದ ಅಯ್ಯಪ್ಪ ಗುಡಿಯವರೆಗೆ ಅಯ್ಯಪ್ಪ ಸ್ವಾಮಿಯ ಶೋಭಾಯಾತ್ರೆ ನಡೆಯಿತು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಇ.ಎನ್.ಶಂಕರನ್ ನಂಬೂದಿರಿ ಅವರ ನೇತೃತ್ವದಲ್ಲಿ ಎಲ್ಲ ಧಾರ್ಮಿಕ ವಿಧಿವಿಧಾನಗಳು ನಡೆದವು. ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಭೂಪಾಳ್ ಪ್ರಹ್ಲಾದ್, ಖಜಾಂಚಿ ರವೀಂದ್ರನಾಥ ಗುಪ್ತ, ಸದಸ್ಯರಾದ ರಾಜೇಶ್, ಬರಡೆ ನಾರಾಯಣ, ಶಿವಪ್ರಸಾದ್, ಗಣೇಶ್ ಹಾಗೂ ಅನೇಕ ಮಂದಿ ದಾನಿಗಳು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>