<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಕರಡಿಯೊಂದು ಮರವೇರಿ ಕುಳಿತಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.</p><p>ಬೆಳಗಿನ ಜಾವ ಗ್ರಾಮದತ್ತ ಕರಡಿ ಬಂದಿದ್ದು, ಬೆಳಕು ಹರಿಯುತ್ತಿದ್ದಂತೆ ಮಾರಮ್ಮಕಟ್ಟೆಯ ಬಳಿ ಮೀನಕರೆ ಮಾರಪ್ಪ ಎನ್ನುವವರ ಕಣದಲ್ಲಿ ಮರವೇರಿ ಕುಳಿತಿದೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತಂದರು.</p><p><strong>ಕರಡಿ ಸೆರೆ</strong>: ಅರಿವಳಿಕೆ ಚುಚ್ಚುಮದ್ದು ನೀಡಿ ಕರಡಿಯನ್ನು ಸೆರೆಹಿಡಿಯಲಾಗಿದ್ದು, ಅದನ್ನು ಸದ್ಯ ಕಮಲಾಪುರದ ಮೃಗಾಲಯದಕ್ಕೆ ಸಾಗಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಕರಡಿಯೊಂದು ಮರವೇರಿ ಕುಳಿತಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.</p><p>ಬೆಳಗಿನ ಜಾವ ಗ್ರಾಮದತ್ತ ಕರಡಿ ಬಂದಿದ್ದು, ಬೆಳಕು ಹರಿಯುತ್ತಿದ್ದಂತೆ ಮಾರಮ್ಮಕಟ್ಟೆಯ ಬಳಿ ಮೀನಕರೆ ಮಾರಪ್ಪ ಎನ್ನುವವರ ಕಣದಲ್ಲಿ ಮರವೇರಿ ಕುಳಿತಿದೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತಂದರು.</p><p><strong>ಕರಡಿ ಸೆರೆ</strong>: ಅರಿವಳಿಕೆ ಚುಚ್ಚುಮದ್ದು ನೀಡಿ ಕರಡಿಯನ್ನು ಸೆರೆಹಿಡಿಯಲಾಗಿದ್ದು, ಅದನ್ನು ಸದ್ಯ ಕಮಲಾಪುರದ ಮೃಗಾಲಯದಕ್ಕೆ ಸಾಗಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>