ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಕಾಳಿ ಜಾತ್ರೆ; ಅಲಗು ಚುಚ್ಚಿಕೊಂಡು ಹರಕೆ ತೀರಿಸಿದ ಭಕ್ತರು

Last Updated 7 ಮಾರ್ಚ್ 2023, 12:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಡ್ಡಿರಾಂಪುರ ಗ್ರಾಮದಲ್ಲಿ ಮಂಗಳವಾರ ಭದ್ರಕಾಳಿ ದೇವಿ ಜಾತ್ರಾ ಮಹೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು.

ಭಕ್ತರು ಬೆನ್ನಿಗೆ ಅಲಗು ಚುಚ್ಚಿಸಿಕೊಂಡು ಹರಕೆ ತೀರಿಸಿದರು. ಹಂಪಿಗೆ ಹೋಗುವ ಮಾರ್ಗದ ಕಾಲುವೆಯಲ್ಲಿ ದೇವಿಗೆ ಗಂಗಾಪೂಜೆ ನೆರವೇರಿಸಿದರು. ಅನಂತರ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಡೆ ಸ್ನಾನ ಮಾಡಿ ಅಗ್ನಿಕುಂಡ ದಾಟಿದರು. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಗ್ರಾಮದ ಮುಖಂಡರಾದ ಮಾರೆಪ್ಪ, ಇಳಂಗಪ್ಪ ವೆಂಕಟೇಶ್, ಮಣಿಕಂಠ, ಗೋವಿಂದರಾಜು ಇತರರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT