ಹೂವಿನಹಡಲಿ (ವಿಜಯನಗರ): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ' ಯಾತ್ರೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ ಅವರನ್ನು ಜೋಡಿಸುವ ಯಾತ್ರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.
ಜಿಲ್ಲೆಯ ಹೂವಿನಹಡಗಲಿಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಹಸಿ ಸುಳ್ಳು ಹೇಳಲು ಭಾರತ್ ಜೋಡೋ ಯಾತ್ರೆ ಮೂಲಕ ನಮ್ಮ ನಡುವೆ ಬರುತ್ತಿದ್ದಾರೆ ಎಂದು ಹೇಳಿದರು.
ಅನ್ನ ಭಾಗ್ಯ ಯೋಜನೆ ತಮ್ಮ ಯೋಜನೆಯೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ವಾಸ್ತವದಲ್ಲಿ ಅದು ಜನತಾ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಕಾಂಗ್ರೆಸ್ ನವರು ಈ ದೇಶ, ರಾಜ್ಯಕ್ಕೆ ಏನೂ ಮಾಡಿಲ್ಲ. ಮೋಸ ಮಾಡುವ, ಸುಳ್ಳು ಹೇಳುವ ಕಾಂಗ್ರೆಸ್ಸಿಗರ ಕೈಗೆ ಅಧಿಕಾರ ಕೊಡಬೇಡಿ ಎಂದರು.
ಸಿಂಗಟಾಲೂರು ಯೋಜನೆಯಿಂದ ಹಡಗಲಿ ತಾಲ್ಲೂಕಿನಲ್ಲಿ 35 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 17ಕೆರೆಗಳನ್ನು ತುಂಬಿಸಲಾಗುತ್ತಿದೆ ಎಂದರು.