ವಿಜಯಶ್ರೀ ಮೋಟಾರ್ಸ್ ನಿರ್ದೇಶಕರಾಗಿರುವ ರಾಹುಲ್ ಅವರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ಹಾಗೂ ವಿಜಯಶ್ರೀ ರೆಸಾರ್ಟ್ ನಿರ್ದೇಶಕ ನಿಖಿಲ್ ಅವರಿಗೆ ಪ್ರವಾಸೋದ್ಯಮ ಕ್ಷೇತ್ರದ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಇತ್ತೀಚೆಗೆ ನಗರದಲ್ಲಿ ಏರ್ಪಡಿಸಿದ್ದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ಸಮಾವೇಶದಲ್ಲಿ ಪ್ರದಾನ ಮಾಡಲಾಯಿತು. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ ದಕ್ಷಿಣ ಭಾರತ ಪ್ರಾಂತೀಯ ಶಾಖೆಗಳಾದ ಬಳ್ಳಾರಿ, ಬೆಳಗಾವಿ ಹಾಗೂ ಹುಬ್ಬಳ್ಳಿ ಸಹಭಾಗಿತ್ವದಲ್ಲಿ ಸಮಾವೇಶ ಏರ್ಪಡಿಸಲಾಗಿತ್ತು.