ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ (ಎಸ್ಸಿ) ಮೋರ್ಚಾದಿಂದ ಸೋಮವಾರ ನಗರದಲ್ಲಿ 'ಹರ್ ಘರ್ ತಿರಂಗಾ' ಬೈಸಿಕಲ್ ಜಾಥಾ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಸೈಕಲ್ ಜಾಥಾಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಚಾಲನೆ ನೀಡಿದರು.
ನಗರಸಭೆ ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯ ಜೀವರತ್ನಂ, ಬಿಜೆಪಿ ಮಂಡಲಾಧ್ಯಕ್ಷ ಕಾಸಿಟ್ಟಿ ಉಮಾಪತಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಕವಿತಾ ಈಶ್ವರ್ ಸಿಂಗ್, ಎಸ್ಸಿ ಮೋರ್ಚಾ ಅಧ್ಯಕ್ಷ ರಾಘವೇಂದ್ರ ಜೆ.ಬಿ., ಸಿದ್ಧಾರ್ಥ್ ಸಿಂಗ್ ಇದ್ದರು.