ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿ -50ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಗೆ ಗುರುವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದುದಿಂದ ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಇಳಕಲ್ ತಾಲ್ಲೂಕಿನ ಶಶಿಕಾಂತ್ ಪೊಲೀಸ್ ಪಾಟೀಲ್ (26) ಹಾಗೂ ಜಗದೀಶ್ ಗುರಿಕಾರ್ (26) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರು ಬೆಂಗಳೂರಿನಿಂದ ಇಳಕಲ್ಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತಡೆಗೋಡೆ ಆಚೆಯ ಹಿನ್ನೀರು ಪ್ರದೇಶದಲ್ಲಿ ಬಿದ್ದಿದ್ದಾರೆ. ಜಗದೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡ ಶಶಿಕಾಂತ್ ಅವರು ಬಳ್ಳಾರಿಯ ವಿಮ್ಸ್ ನಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.