‘ದೇಶದಲ್ಲಿ ಜಿಹಾದಿ ಮನಃಸ್ಥಿತಿ ಹೆಚ್ಚಾಗುತ್ತಿದೆ. ಅದಕ್ಕೆ ಈ ರೀತಿಯ ಘಟನೆಗಳೇ ಸಾಕ್ಷಿ. ಹಿಂದೂಗಳ ವಿರುದ್ಧ ಒಳಸಂಚು ರೂಪಿಸಲಾಗುತ್ತಿದೆ. ಮತಬ್ಯಾಂಕ್ ರಾಜಕಾರಣದಿಂದ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆದರೂ ಪಾಠ ಕಲಿತಿಲ್ಲ. ಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ಆಗ್ರಹಿಸಿದರು.