ಈ ರೀತಿಯ ಘಟನೆ ಕರ್ನಾಟಕದಲ್ಲಿ ಮರುಕಳಿಸಲುಬಿಡಬಾರದು. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರು ಗೂಂಡಾಗಳು, ದೇಶದ್ರೋಹಿಗಳಿದ್ದಾರೆ. ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ,ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕರ್ನಾಟಕದಲ್ಲಿ ಕೆಟ್ಟ ಚಾಳಿ ಪ್ರಾರಂಭವಾಗಿದೆ. ಅವರ ಶಕ್ತಿ ಕುಗ್ಗಿಸಲು ಮುಖ್ಯಮಂತ್ರಿ, ಗೃಹಸಚಿವರು ಕ್ರಮ ಕೈಗೊಳ್ಳಬೇಕು ಎಂದು ಭಾನುವಾರ ಇಲ್ಲಿ ಒತ್ತಾಯಿಸಿದರು.