<p><strong>ಕೊಟ್ಟೂರು (ವಿಜಯನಗರ ಜಿಲ್ಲೆ):</strong> ‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಬಡಿದಾಟವೂ ಇಲ್ಲ. ಇರುವುದೊಂದೇ, ಅದು ಬಿಜೆಪಿ ಬಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಹೇಳಿದರು.</p>.<p>ಬಿಜೆಪಿಯಲ್ಲಿನ ಕೆಲ ಭಿನ್ನಮತೀಯರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ವಿಷಯದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಕೇಂದ್ರ ಸಚಿವರು. ಅವರನ್ನು ಯಾರು ಬೇಕಾದರೂ ಭೇಟಿ ಆಗಬಹುದು. ಶಾಸಕರು ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಭೇಟಿ ಮಾಡಬಹುದು’ ಎಂದರು.</p>.<p>ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಬಿಜೆಪಿ ನಾಯಕರ ಸಂಪರ್ಕದಲ್ಲಿ ಇರುವ ವಿಷಯ ಕೇಳಿದಾಗ, ‘ಇದರ ಮಾಹಿತಿ ನನಗಿಲ್ಲ’ ಎಂದರು. ‘ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು ಕುರ್ಚಿ ಕಿತ್ತಾಟದಲ್ಲಿ ತೊಡಗಿದೆ’ ಎಂದು ಅವರು ಹೇಳಿದರು.</p>.ತಂತ್ರಗಾರಿಕೆ ಬದಲಿಸಿದ ಬಿಜೆಪಿ ಭಿನ್ನರು: ದೆಹಲಿಯಲ್ಲಿ ಸಭೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು (ವಿಜಯನಗರ ಜಿಲ್ಲೆ):</strong> ‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಬಡಿದಾಟವೂ ಇಲ್ಲ. ಇರುವುದೊಂದೇ, ಅದು ಬಿಜೆಪಿ ಬಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಹೇಳಿದರು.</p>.<p>ಬಿಜೆಪಿಯಲ್ಲಿನ ಕೆಲ ಭಿನ್ನಮತೀಯರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ವಿಷಯದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಕೇಂದ್ರ ಸಚಿವರು. ಅವರನ್ನು ಯಾರು ಬೇಕಾದರೂ ಭೇಟಿ ಆಗಬಹುದು. ಶಾಸಕರು ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಭೇಟಿ ಮಾಡಬಹುದು’ ಎಂದರು.</p>.<p>ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಬಿಜೆಪಿ ನಾಯಕರ ಸಂಪರ್ಕದಲ್ಲಿ ಇರುವ ವಿಷಯ ಕೇಳಿದಾಗ, ‘ಇದರ ಮಾಹಿತಿ ನನಗಿಲ್ಲ’ ಎಂದರು. ‘ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು ಕುರ್ಚಿ ಕಿತ್ತಾಟದಲ್ಲಿ ತೊಡಗಿದೆ’ ಎಂದು ಅವರು ಹೇಳಿದರು.</p>.ತಂತ್ರಗಾರಿಕೆ ಬದಲಿಸಿದ ಬಿಜೆಪಿ ಭಿನ್ನರು: ದೆಹಲಿಯಲ್ಲಿ ಸಭೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>