ಶಾಸಕ ಜಗದೀಶ ಶೆಟ್ಟರ್, ಸಂಸದ ವೈ. ದೇವೇಂದ್ರಪ್ಪ, ತೆಲಂಗಾಣದ ಬಿಜೆಪಿ ನಾಯಕಿ ಬಿ.ಕೆ. ಅರುಣಾ, ವಿಧಾನ ಪರಿಷತ್ ಸದಸ್ಯ ವೈ. ಸತೀಶ್, ಬಿಜೆಪಿ ಮಂಡಲ ಅಧ್ಯಕ್ಷ ಕೆ.ಚನ್ನಪ್ಪ, ಎಸ್ಟಿ ಮೋರ್ಚಾ ರಾಜ್ಯ ಕೋಶಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೂರ್ಯಪಾಪಣ್ಣ, ಬಿ. ಭೀಮೇಶ್ ಭಾಗಿಯಾಗಿದ್ದರು. ‘ರಾಜ್ಯ, ಕೇಂದ್ರ ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಪುನಃ ಅಧಿಕಾರದ ಗದ್ದುಗೆ ಏರಲಿದೆ’ ಎಂದು ಮುಖಂಡರು ಭರವಸೆ ವ್ಯಕ್ತಪಡಿಸಿದರು.