ಕಾರ್ಯಕರ್ತರು ಜಮಾಯಿಸುವ ಮೊದಲೇ ಪೊಲೀಸರು ಸ್ಥಳಕ್ಕೆ ಬಂದು ಕಾರ್ಯಕರ್ತರನ್ನು ಬಂಧಿಸಲು ಸಿದ್ಧತೆ ನಡೆಸಿದ್ದರು. ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿಚಡಿ ಕೊಟ್ರೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಕಾರ್ಯಕರ್ತರನ್ನು ಸುತ್ತುವರಿದರು. ತಂಗಡಗಿ ಅವರ ಪ್ರತಿಕೃತಿ ದಹಿಸುವ ಉದ್ದೇಶ ಇತ್ತು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ ಕಾರ್ಯಕರ್ತರನ್ನು ಬಂಧಿಸಿ, ಪಟ್ಟಣ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಲಾಯಿತು.