ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧೆಡೆ ಶುಕ್ರವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಂತ್ರಪಳ್ಳಿಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಸಿ. ನಾಗರಾಜ್ (11) ಮೃತ ಬಾಲಕ. ಹೊಲದಿಂದ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿಯ ಸುತ್ತಮುತ್ತ ಶುಕ್ರವಾರ ಸಂಜೆ 4ರ ಸುಮಾರಿಗೆ ಬಿರುಗಾಳಿ ಸಮೇತ ಕೆಲಕಾಲ ಮಳೆಯಾಗಿದೆ.