ಅರಸೀಕೆರೆ (ವಿಜಯನಗರ ಜಿಲ್ಲೆ): ಇಲ್ಲಿನ ಚಿಕ್ಕಮೆಗಳಗೆರೆ ಗ್ರಾಮದ ಕೆರೆಯ ಸೇತುವೆ ಶಿಥಿಲಗೊಂಡು, ರಸ್ತೆ ಹಾಳಾಗಿದ್ದರೂ ಅದನ್ನು ದುರಸ್ತಿಗೊಳಿಸುವ ಗೋಜಿಗೆ ಹೋಗದ ಕಾರಣ ಸಾರ್ವಜನಿಕರು ಪರದಾಡುವುದು ತಪ್ಪಿಲ್ಲ.
ಕಳೆದ ಹಿಂಗಾರಿನ ಅವಧಿಯಲ್ಲಿ ಉಚ್ಚಂಗಿದುರ್ಗ, ಹಿರೇಮೆಗಳಗೆರೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿತ್ತು. ಮಳೆಯಿಂದಾಗಿ ಕೆರೆ ಬಳಿ ಹಳ್ಳಕ್ಕೆ ನಿರ್ಮಿಸಿದ್ದ ಸೇತುವೆ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿತ್ತು. ರಸ್ತೆಯುದ್ದಕ್ಕೂ ಕಂದಕಗಳು ಸೃಷ್ಟಿಯಾಗಿವೆ. ಸಂಚಾರ ದುಸ್ತರವಾಗಿತ್ತು. ಇತ್ತೀಚೆಗೆ ರೈತರೇ ಅಲ್ಲಲ್ಲಿ ಮಣ್ಣು ಹಾಕಿ, ಓಡಾಡಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ, ದೊಡ್ಡ ವಾಹನಗಳ ಸಂಚಾರ ಸಾಧ್ಯವಿಲ್ಲ. ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ಪರಿಸ್ಥಿತಿ ಇದೆ.