ಹೊಸಪೇಟೆ (ವಿಜಯನಗರ): ‘2,500 ವರ್ಷಗಳ ಹಿಂದೆಯೇ ಗೌತಮ ಬುದ್ಧರು ಈ ನೆಲದಲ್ಲಿ ಜೀವಂತವಾಗಿದ್ದ ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆಯನ್ನು ಖಂಡಿಸಿದ್ದರು ಎಂದರೆ ಇಂದಿಗೂ ಜೀವಂತವಿರುವ ಈ ಎಲ್ಲವುಗಳ ಸೃಷ್ಟಿಕರ್ತರು ಯಾರೆಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಹಾಗೂ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಹೇಳಿದರು.