ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಸಾರ್ವಜನಿಕ ರಸ್ತೆ ಅತಿಕ್ರಮಣ, ಕಟ್ಟಡ ತೆರವು

Last Updated 20 ಆಗಸ್ಟ್ 2022, 6:42 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಎಂ.ಪಿ. ಪ್ರಕಾಶ್ ನಗರದಲ್ಲಿ ಸಾರ್ವಜನಿಕ ರಸ್ತೆ ಮೇಲಿನ ನಿರ್ಮಾಣ ಹಂತದ ಕಟ್ಟಡವನ್ನು ಶನಿವಾರ ನಗರಸಭೆ ತೆರವುಗೊಳಿಸಿತು.

ನಗರಸಭೆ ಪೌರಾಯುಕ್ತ ಮನೋಹರ್ ಸಮ್ಮುಖದಲ್ಲಿ ಜೆ.ಸಿ.ಬಿ ಮೂಲಕ ತೆರವುಗೊಳಿಸಲಾಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

'ಸಾರ್ವಜನಿಕ ರಸ್ತೆ ಮೇಲೆ ಯಾರೋ ಅಪರಿಚಿತರು ಕಟ್ಟಡ ನಿರ್ಮಿಸಿದ್ದರು. ಅದರ ವಾರಸುದಾರರು ಯಾರಾದರೂ ಇದ್ದರೆ ಸಂಪರ್ಕಿಸುವಂತೆ ನಗರಸಭೆಯಿಂದ ಮಾಧ್ಯಮಗಳಲ್ಲಿ ಜಾಹೀರಾತು ನೀಡಲಾಗಿತ್ತು. ನೋಟಿಸ್ ಅವಧಿ ಮುಗಿದಿದ್ದರಿಂದ ಕಟ್ಟಡ ತೆರವುಗೊಳಿಸಲಾಗಿದೆ' ಎಂದು ಮನೋಹರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT