<p><strong>ಹೊಸಪೇಟೆ(ವಿಜಯನಗರ):</strong> ‘ದಸರಾ ಒಳಗೊಂಡಂತೆ ಸರ್ಕಾರ ಆಯೋಜಿಸುವ ಯಾವುದೇ ಉತ್ಸವಗಳಲ್ಲಿ ನಾನು ನನ್ನ ಕವಿತೆ ಓದಲಾರೆ’ ಎಂದು ಕವಿ ಬಿ.ಪೀರ್ ಬಾಷಾ ತಿಳಿಸಿದ್ದಾರೆ.</p>.<p>ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ನನ್ನ ಹೆಸರಿರುವುದನ್ನು ಗಮನಿಸಿದ್ದೇನೆ. ನಿನ್ನೆ ರಾತ್ರಿಯಷ್ಟೆ ಆಯೋಜಕರು ನನಗೆ ಆಹ್ವಾನಿಸಿದ್ದರು. ನಾನು ಈ ಆಹ್ವಾನವನ್ನು ನಿರಾಕರಿಸಿದ್ದೇನೆ. ಮುದ್ರಣಕ್ಕೆ ಹೋದ ಬಳಿಕ ಒಪ್ಪಿಗೆ ಕೇಳಿರಬಹುದು ಎನಿಸುತ್ತಿದೆ. ಇದು ಸರಿಯಲ್ಲ. ಎರಡನೆ ಸಲ ಹೀಗಾಗುತ್ತಿದೆ ಎಂದಿದ್ದಾರೆ.</p>.<p>ಇಂತಹ ಉತ್ಸವಗಳ ಬಗ್ಗೆ ನನ್ನ ವಿರೋಧವಿದೆ. ಒಬ್ಬ ಜನತಂತ್ರವಾದಿಯಾಗಿ ಇಂತಹ ಉತ್ಸವಗಳನ್ನು ಒಪ್ಪಲಾರೆ. ಉತ್ಸವಗಳ ಹೆಸರಿನಲ್ಲಿ ನಡೆವ ಕೋಟ್ಯಂತರ ರೂಪಾಯಿಗಳ ದುರ್ವವ್ಯಹಾರದ ತಿಳಿವಳಿಕೆ ನನಗಿದೆ. ಈ ಉತ್ಸವ ಕೂಟಗಳಲ್ಲಿ ಭಾಗವಹಿಸುವ ಮೂಲಕ ಅಂತಹದ್ದಕ್ಕೆ ಪರೋಕ್ಷ ಸಮ್ಮತಿ ನೀಡುವ ಅಥವಾ ಅಂತಹ ಪಾಪದಲ್ಲಿ ಪಾಲ್ಗೊಳ್ಳುವ ಕವಿ ನಾನಾಗಲಾರೆ. ನನ್ನ ಅಸಮ್ಮತಿಯ ನಂತರವೂ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಕಟವಾಗಿದೆ. ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ‘ದಸರಾ ಒಳಗೊಂಡಂತೆ ಸರ್ಕಾರ ಆಯೋಜಿಸುವ ಯಾವುದೇ ಉತ್ಸವಗಳಲ್ಲಿ ನಾನು ನನ್ನ ಕವಿತೆ ಓದಲಾರೆ’ ಎಂದು ಕವಿ ಬಿ.ಪೀರ್ ಬಾಷಾ ತಿಳಿಸಿದ್ದಾರೆ.</p>.<p>ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ನನ್ನ ಹೆಸರಿರುವುದನ್ನು ಗಮನಿಸಿದ್ದೇನೆ. ನಿನ್ನೆ ರಾತ್ರಿಯಷ್ಟೆ ಆಯೋಜಕರು ನನಗೆ ಆಹ್ವಾನಿಸಿದ್ದರು. ನಾನು ಈ ಆಹ್ವಾನವನ್ನು ನಿರಾಕರಿಸಿದ್ದೇನೆ. ಮುದ್ರಣಕ್ಕೆ ಹೋದ ಬಳಿಕ ಒಪ್ಪಿಗೆ ಕೇಳಿರಬಹುದು ಎನಿಸುತ್ತಿದೆ. ಇದು ಸರಿಯಲ್ಲ. ಎರಡನೆ ಸಲ ಹೀಗಾಗುತ್ತಿದೆ ಎಂದಿದ್ದಾರೆ.</p>.<p>ಇಂತಹ ಉತ್ಸವಗಳ ಬಗ್ಗೆ ನನ್ನ ವಿರೋಧವಿದೆ. ಒಬ್ಬ ಜನತಂತ್ರವಾದಿಯಾಗಿ ಇಂತಹ ಉತ್ಸವಗಳನ್ನು ಒಪ್ಪಲಾರೆ. ಉತ್ಸವಗಳ ಹೆಸರಿನಲ್ಲಿ ನಡೆವ ಕೋಟ್ಯಂತರ ರೂಪಾಯಿಗಳ ದುರ್ವವ್ಯಹಾರದ ತಿಳಿವಳಿಕೆ ನನಗಿದೆ. ಈ ಉತ್ಸವ ಕೂಟಗಳಲ್ಲಿ ಭಾಗವಹಿಸುವ ಮೂಲಕ ಅಂತಹದ್ದಕ್ಕೆ ಪರೋಕ್ಷ ಸಮ್ಮತಿ ನೀಡುವ ಅಥವಾ ಅಂತಹ ಪಾಪದಲ್ಲಿ ಪಾಲ್ಗೊಳ್ಳುವ ಕವಿ ನಾನಾಗಲಾರೆ. ನನ್ನ ಅಸಮ್ಮತಿಯ ನಂತರವೂ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಕಟವಾಗಿದೆ. ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>