<p><strong>ಹೊಸಪೇಟೆ (ವಿಜಯನಗರ): </strong>ಠೇವಣಿದಾರರಿಗೆ ಅವರ ಠೇವಣಿ ಮರುಪಾವತಿ ಮಾಡದೆ ವಂಚಿಸಲಾಗಿದೆ ಎಂಬ ದೂರಿನ ಮೇರೆಗೆ ನಗರದ ಅಹನಾ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ನ ಅಧ್ಯಕ್ಷರಾದ ಕೆ. ವೀರಭದ್ರಪ್ಪ, ನಿರ್ದೇಶಕರಾದ ಕೆ. ಉಮೇಶಪ್ಪ, ಕೆ. ಮಲ್ಲಿಕಾರ್ಜುನ, ಚಂದ್ರಪ್ಪ ಸೇರಿದಂತೆ ಒಟ್ಟು 23 ನಿರ್ದೇಶಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಅಹನಾ ಸೌಹಾರ್ದ ಬ್ಯಾಂಕಿನಲ್ಲಿ 400ಕ್ಕೂ ಅಧಿಕ ಜನ ಹಣ ಠೇವಣಿದಾರರಿದ್ದಾರೆ. ಅಧ್ಯಕ್ಷ ಹಾಗೂ 23 ಜನ ನಿರ್ದೇಶಕರು ಅಧಿಕಾರ ದುರುಪಯೋಗ ಪಡಿಸಿಕೊಂಡು ಯಾವುದೇ ಅಗತ್ಯ ಭದ್ರತೆಯ ದಾಖಲಾತಿಗಳಿಲ್ಲದೆ ₹7.50 ಕೋಟಿ ಸಾಲ ನೀಡಿದ್ದಾರೆ. ಕಾಲ್ಪನಿಕ ಜಮೆ, ಖರ್ಚು ತೋರಿಸಿ ₹9.32 ಕೋಟಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಹಕಾರಿ ಅಧಿನಿಯಮದ ನಿಯಮ ಪಾಲಿಸಿಲ್ಲ ಎಂದು ಠೇವಣಿದಾರರು ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದ ವ್ಯವಸ್ಥಾಪಕ ಶಂಕರಗೌಡ ಜಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದರು. ಅವರ ಸೂಚನೆ ಮೇರೆಗೆ ಸೌಹಾರ್ದ ಸಹಕಾರಿಯ ಅಧಿಕಾರಿ ಕೆ.ಆರ್. ರವಿಕುಮಾರ ಕೊಟ್ಟಿರುವ ದೂರಿನ ಮೇರೆಗೆ 23 ಜನರ ವಿರುದ್ಧ ಏ. 4ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ ಮೇಟಿ ತಿಳಿಸಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಅಧ್ಯಕ್ಷರು, ನಿರ್ದೇಶಕರು, ಹಾಲಿ ಮತ್ತು ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳಿವೆ. ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ತನಿಖೆ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಸಿಬಿಐ ತನಿಖೆಗೆ ಆಗ್ರಹ:</strong></p>.<p>‘ಠೇವಣಿದಾರರ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ 23 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹಲವು ದಿನಗಳಾಗಿವೆ. ಆದರೆ, ಇದುವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ. ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಠೇವಣಿದಾರರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಠೇವಣಿದಾರರಿಗೆ ಅವರ ಠೇವಣಿ ಮರುಪಾವತಿ ಮಾಡದೆ ವಂಚಿಸಲಾಗಿದೆ ಎಂಬ ದೂರಿನ ಮೇರೆಗೆ ನಗರದ ಅಹನಾ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ನ ಅಧ್ಯಕ್ಷರಾದ ಕೆ. ವೀರಭದ್ರಪ್ಪ, ನಿರ್ದೇಶಕರಾದ ಕೆ. ಉಮೇಶಪ್ಪ, ಕೆ. ಮಲ್ಲಿಕಾರ್ಜುನ, ಚಂದ್ರಪ್ಪ ಸೇರಿದಂತೆ ಒಟ್ಟು 23 ನಿರ್ದೇಶಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಅಹನಾ ಸೌಹಾರ್ದ ಬ್ಯಾಂಕಿನಲ್ಲಿ 400ಕ್ಕೂ ಅಧಿಕ ಜನ ಹಣ ಠೇವಣಿದಾರರಿದ್ದಾರೆ. ಅಧ್ಯಕ್ಷ ಹಾಗೂ 23 ಜನ ನಿರ್ದೇಶಕರು ಅಧಿಕಾರ ದುರುಪಯೋಗ ಪಡಿಸಿಕೊಂಡು ಯಾವುದೇ ಅಗತ್ಯ ಭದ್ರತೆಯ ದಾಖಲಾತಿಗಳಿಲ್ಲದೆ ₹7.50 ಕೋಟಿ ಸಾಲ ನೀಡಿದ್ದಾರೆ. ಕಾಲ್ಪನಿಕ ಜಮೆ, ಖರ್ಚು ತೋರಿಸಿ ₹9.32 ಕೋಟಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಹಕಾರಿ ಅಧಿನಿಯಮದ ನಿಯಮ ಪಾಲಿಸಿಲ್ಲ ಎಂದು ಠೇವಣಿದಾರರು ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದ ವ್ಯವಸ್ಥಾಪಕ ಶಂಕರಗೌಡ ಜಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದರು. ಅವರ ಸೂಚನೆ ಮೇರೆಗೆ ಸೌಹಾರ್ದ ಸಹಕಾರಿಯ ಅಧಿಕಾರಿ ಕೆ.ಆರ್. ರವಿಕುಮಾರ ಕೊಟ್ಟಿರುವ ದೂರಿನ ಮೇರೆಗೆ 23 ಜನರ ವಿರುದ್ಧ ಏ. 4ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ ಮೇಟಿ ತಿಳಿಸಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಅಧ್ಯಕ್ಷರು, ನಿರ್ದೇಶಕರು, ಹಾಲಿ ಮತ್ತು ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳಿವೆ. ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ತನಿಖೆ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಸಿಬಿಐ ತನಿಖೆಗೆ ಆಗ್ರಹ:</strong></p>.<p>‘ಠೇವಣಿದಾರರ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ 23 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹಲವು ದಿನಗಳಾಗಿವೆ. ಆದರೆ, ಇದುವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ. ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಠೇವಣಿದಾರರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>