ಹೊಸಪೇಟೆ (ವಿಜಯನಗರ): ಠೇವಣಿದಾರರಿಗೆ ಅವರ ಠೇವಣಿ ಮರುಪಾವತಿ ಮಾಡದೆ ವಂಚಿಸಲಾಗಿದೆ ಎಂಬ ದೂರಿನ ಮೇರೆಗೆ ನಗರದ ಅಹನಾ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ನ ಅಧ್ಯಕ್ಷರಾದ ಕೆ. ವೀರಭದ್ರಪ್ಪ, ನಿರ್ದೇಶಕರಾದ ಕೆ. ಉಮೇಶಪ್ಪ, ಕೆ. ಮಲ್ಲಿಕಾರ್ಜುನ, ಚಂದ್ರಪ್ಪ ಸೇರಿದಂತೆ ಒಟ್ಟು 23 ನಿರ್ದೇಶಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.