<p><strong>ಮರಿಯಮ್ಮನಹಳ್ಳಿ (ವಿಜಯನಗರ):</strong> ಇಲ್ಲಿಗೆ ಸಮೀಪದ 114-ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.</p><p>ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ನೂರು ಗ್ರಾಮದ ಸುಜಾತ(40) ಹಾಗೂ ಅವರ ತಂದೆ ನಾಗಪ್ಪ(80) ಮತ್ತು ಮತ್ತೊಂದು ಬೈಕ್ನಲ್ಲಿದ್ದ ತಾಳೇಬಸಾಪುರ ತಾಂಡಾದ ದುರುಗಪ್ಪ(55) ಎಂದು ಗುರುತಿಸಲಾಗಿದ್ದು, 20 ಜನ ತೀವ್ರ ಗಾಯಗೊಂಡಿದ್ದಾರೆ.</p><p>ದೆಹಲಿಯಿಂದ ಬೆಂಗಳೂರಿಗೆ ಬೆಳ್ಳುಳ್ಳಿ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಆ ಲಾರಿ ಮೂರು ಬೈಕ್ ಸೇರಿದಂತೆ ಒಂದು ಬಸ್, ಕ್ಯಾಂಟರ್, ಕಾರು ಹಾಗೂ ಕಂಟೇನರ್ ಲಾರಿಗೆ ಗುದ್ದಿ ಅಪಘಾತ ಸಂಭವಿಸಿದೆ.</p><p>ಅಪಘಾತದಲ್ಲಿ ತೀವ್ರ ಗಾಯಗೊಂಡ 20 ಜನರಲ್ಲಿ ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಉಳಿದ 14 ಜನರಿಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ):</strong> ಇಲ್ಲಿಗೆ ಸಮೀಪದ 114-ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.</p><p>ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ನೂರು ಗ್ರಾಮದ ಸುಜಾತ(40) ಹಾಗೂ ಅವರ ತಂದೆ ನಾಗಪ್ಪ(80) ಮತ್ತು ಮತ್ತೊಂದು ಬೈಕ್ನಲ್ಲಿದ್ದ ತಾಳೇಬಸಾಪುರ ತಾಂಡಾದ ದುರುಗಪ್ಪ(55) ಎಂದು ಗುರುತಿಸಲಾಗಿದ್ದು, 20 ಜನ ತೀವ್ರ ಗಾಯಗೊಂಡಿದ್ದಾರೆ.</p><p>ದೆಹಲಿಯಿಂದ ಬೆಂಗಳೂರಿಗೆ ಬೆಳ್ಳುಳ್ಳಿ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಆ ಲಾರಿ ಮೂರು ಬೈಕ್ ಸೇರಿದಂತೆ ಒಂದು ಬಸ್, ಕ್ಯಾಂಟರ್, ಕಾರು ಹಾಗೂ ಕಂಟೇನರ್ ಲಾರಿಗೆ ಗುದ್ದಿ ಅಪಘಾತ ಸಂಭವಿಸಿದೆ.</p><p>ಅಪಘಾತದಲ್ಲಿ ತೀವ್ರ ಗಾಯಗೊಂಡ 20 ಜನರಲ್ಲಿ ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಉಳಿದ 14 ಜನರಿಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>