<p><strong>ಹೊಸಪೇಟೆ (ವಿಜಯನಗರ):</strong> ಕುವೆಂಪು ಅವರ ಸಾಹಿತ್ಯ ಹಾಗೂ ಗಿರೀಶ್ ಕಾರ್ನಾಡ್ ಅವರ `ನಾಗಮಂಡಲ' ನಾಟಕದಲ್ಲಿನ ಹೆಣ್ಣಿನ ಭಾವನೆಗಳು, ಸೆಳೆತಗಳನ್ನು ಹೋಲುವಂತೆ `ಜೋಕುಮಾರ ಸ್ವಾಮಿ'ಯಲ್ಲಿಯೂ ಮಾನವೀಯ ಮೌಲ್ಯಗಳು ಜೀವಂತವಾಗಿ ಮೂಡಿಬಂದಿವೆ, ಕಂಬಾರರ ಚಿಂತನೆ ನಮ್ಮ ನಾಡಿನ ಸಾಂಸ್ಕೃತಿಕ ಪ್ರತಿಧ್ವನಿಯಂತೆಯೇ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಸಂಸ್ಥಾಪಕ ಕುಲಪತಿ ಪ್ರೊ.ಚಂದ್ರಶೇಖರ ಕಂಬಾರ ಅವರ 89ನೇ ಜನ್ಮದಿನದ ಪ್ರಯುಕ್ತ ಅವರ ‘ಜೋಕುಮಾರಸ್ವಾಮಿ' ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ ವೇಳೆ ಅವರು ಈ ವಿಷಯ ತಿಳಿಸಿದರು.</p>.<p>‘ಉಳುವವನೇ ಭೂಮಿಯ ಒಡೆಯ' ಎಂಬ ಸಾಮಾಜಿಕ ಸಂದೇಶದ ಜೊತೆಗೆ, ಸಮಾಜದಲ್ಲಿ ಪ್ರೀತಿಗೆ ಪಾತ್ರನಾದ ವ್ಯಕ್ತಿ ಯಾಕೆ ಗಂಡನಾಗಿರಬಾರದು ಎಂಬ ಆಳವಾದ ತಾತ್ಪರ್ಯವನ್ನು ಕಂಬಾರರು ಜನಸಾಮಾನ್ಯರಿಗೆ ಅರ್ಥವಾಗುವ ಹಳ್ಳಿ ಸೊಗಡಿನ ಭಾಷಾ ಶೈಲಿಯಲ್ಲಿ ಪರಿಣಾಮಕಾರಿಯಾಗಿ ನಿರೂಪಿಸಿದ್ದಾರೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ನಾಟಕದಲ್ಲಿ ಸಣ್ಣದು-ದೊಡ್ಡದು ಎನ್ನುವ ಪಾತ್ರಗಳಿಲ್ಲ; ಪ್ರತಿಯೊಂದು ಪಾತ್ರವೂ ತನ್ನ ಜೀವಂತಿಕೆಯಿಂದ ನಾಟಕದ ಸಂದೇಶವನ್ನು ಪ್ರೇಕ್ಷಕರಿಗೆ ತಲುಪಿಸಬೇಕು ಎಂದರು.</p>.<p>ಹಿರಿಯ ರಂಗಕರ್ಮಿ ಸಿ.ಟಿ. ಬ್ರಹ್ಮಾಚಾರ್ ಅವರ ನಿರ್ದೇಶನ, ಜಯರಾಮ ಕೆ.ಎಚ್. ಅವರ ರಾಗ ಸಂಯೋಜನೆ, ಪ್ರೊ.ವೀರೇಶ ಬಡಿಗೇರ ಅವರ ಸಂಗೀತ ನಿರ್ದೇಶನ, ಸಂಗೀತ ವಿಭಾಗದ ವಿದ್ಯಾರ್ಥಿಗಳು ಧ್ವನಿ ಮತ್ತು ಹಿನ್ನೆಲೆ ಗಾಯನ ಸೇರಿದಂತೆ ಈ ನಾಟಕ ಪ್ರದರ್ಶನವು ಪ್ರೇಕ್ಷಕರ ಮನ ಸೆಳೆಯಿತು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಲಲಿತಕಲಾ ವಿಭಾಗದ ಡೀನ್ ಪ್ರೊ.ಶಿವಾನಂದ ವಿರಕ್ತಮಠ, ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪ್ರೊ.ಮಾಧವ ಪೆರಾಜೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕುವೆಂಪು ಅವರ ಸಾಹಿತ್ಯ ಹಾಗೂ ಗಿರೀಶ್ ಕಾರ್ನಾಡ್ ಅವರ `ನಾಗಮಂಡಲ' ನಾಟಕದಲ್ಲಿನ ಹೆಣ್ಣಿನ ಭಾವನೆಗಳು, ಸೆಳೆತಗಳನ್ನು ಹೋಲುವಂತೆ `ಜೋಕುಮಾರ ಸ್ವಾಮಿ'ಯಲ್ಲಿಯೂ ಮಾನವೀಯ ಮೌಲ್ಯಗಳು ಜೀವಂತವಾಗಿ ಮೂಡಿಬಂದಿವೆ, ಕಂಬಾರರ ಚಿಂತನೆ ನಮ್ಮ ನಾಡಿನ ಸಾಂಸ್ಕೃತಿಕ ಪ್ರತಿಧ್ವನಿಯಂತೆಯೇ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಸಂಸ್ಥಾಪಕ ಕುಲಪತಿ ಪ್ರೊ.ಚಂದ್ರಶೇಖರ ಕಂಬಾರ ಅವರ 89ನೇ ಜನ್ಮದಿನದ ಪ್ರಯುಕ್ತ ಅವರ ‘ಜೋಕುಮಾರಸ್ವಾಮಿ' ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ ವೇಳೆ ಅವರು ಈ ವಿಷಯ ತಿಳಿಸಿದರು.</p>.<p>‘ಉಳುವವನೇ ಭೂಮಿಯ ಒಡೆಯ' ಎಂಬ ಸಾಮಾಜಿಕ ಸಂದೇಶದ ಜೊತೆಗೆ, ಸಮಾಜದಲ್ಲಿ ಪ್ರೀತಿಗೆ ಪಾತ್ರನಾದ ವ್ಯಕ್ತಿ ಯಾಕೆ ಗಂಡನಾಗಿರಬಾರದು ಎಂಬ ಆಳವಾದ ತಾತ್ಪರ್ಯವನ್ನು ಕಂಬಾರರು ಜನಸಾಮಾನ್ಯರಿಗೆ ಅರ್ಥವಾಗುವ ಹಳ್ಳಿ ಸೊಗಡಿನ ಭಾಷಾ ಶೈಲಿಯಲ್ಲಿ ಪರಿಣಾಮಕಾರಿಯಾಗಿ ನಿರೂಪಿಸಿದ್ದಾರೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ನಾಟಕದಲ್ಲಿ ಸಣ್ಣದು-ದೊಡ್ಡದು ಎನ್ನುವ ಪಾತ್ರಗಳಿಲ್ಲ; ಪ್ರತಿಯೊಂದು ಪಾತ್ರವೂ ತನ್ನ ಜೀವಂತಿಕೆಯಿಂದ ನಾಟಕದ ಸಂದೇಶವನ್ನು ಪ್ರೇಕ್ಷಕರಿಗೆ ತಲುಪಿಸಬೇಕು ಎಂದರು.</p>.<p>ಹಿರಿಯ ರಂಗಕರ್ಮಿ ಸಿ.ಟಿ. ಬ್ರಹ್ಮಾಚಾರ್ ಅವರ ನಿರ್ದೇಶನ, ಜಯರಾಮ ಕೆ.ಎಚ್. ಅವರ ರಾಗ ಸಂಯೋಜನೆ, ಪ್ರೊ.ವೀರೇಶ ಬಡಿಗೇರ ಅವರ ಸಂಗೀತ ನಿರ್ದೇಶನ, ಸಂಗೀತ ವಿಭಾಗದ ವಿದ್ಯಾರ್ಥಿಗಳು ಧ್ವನಿ ಮತ್ತು ಹಿನ್ನೆಲೆ ಗಾಯನ ಸೇರಿದಂತೆ ಈ ನಾಟಕ ಪ್ರದರ್ಶನವು ಪ್ರೇಕ್ಷಕರ ಮನ ಸೆಳೆಯಿತು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಲಲಿತಕಲಾ ವಿಭಾಗದ ಡೀನ್ ಪ್ರೊ.ಶಿವಾನಂದ ವಿರಕ್ತಮಠ, ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪ್ರೊ.ಮಾಧವ ಪೆರಾಜೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>