ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕಮಾಂಡ್ ನಿಲುವಿಗೆ ಬದ್ಧ: ಸಂಸದ ದೇವೇಂದ್ರಪ್ಪ

Last Updated 19 ಜೂನ್ 2021, 9:34 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆದಿರುವ ಚರ್ಚೆ ಕುರಿತು ನಾನೇನೂ ಮಾತನಾಡಲಾರೆ. ನಾನು ಹೈಕಮಾಂಡ್ ನಿಲುವಿಗೆ ಬದ್ಧನಾಗಿದ್ದೇನೆ. ಯಾರ ಪರ, ವಿರುದ್ಧವಾಗಿ ಇಲ್ಲ’ ಎಂದು ಸಂಸದ ವೈ. ದೇವೇಂದ್ರಪ್ಪ ತಿಳಿಸಿದರು.

ಶನಿವಾರ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪಕ್ಷದ ಹೈಕಮಾಂಡ್ ಪ್ರತಿಯೊಬ್ಬ ಕಾರ್ಯಕರ್ತರಿಗೆ ಮನೆಯ ಯಜಮಾನ ಇದ್ದಂತೆ. ಅವರು ಹೇಳಿದಂತೆ ಕೇಳುವ ಹಾಗೂ ನೀಡಿದ ಆದೇಶ ಪಾಲಿಸುತ್ತೇನೆ’ ಎಂದರು.

‘ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ, ಅತೃಪ್ತಿ, ಪರ, ವಿರೋಧ ಎನ್ನುವುದು ಅವರವರ ಭಾವನೆಗೆ ತಕ್ಕಂತೆ. ಹರಿಯುವ ನೀರಿನಂತೆ ಯಾರ ಮನಸ್ಸಿನಲ್ಲಿ ಏನಿದೆ ಅನ್ನುವುದು ಅರಿಯುವುದಾದರೂ ಹೇಗೆ?’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುಲಭವಲ್ಲ’ ಎಂದು ಶುಕ್ರವಾರ ದೇವೇಂದ್ರಪ್ಪ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT