ಹೊಸಪೇಟೆ (ವಿಜಯನಗರ): ರಾಜ್ಯದ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಮಂಗಳವಾರ ಹಂಪಿಗೆ ಭೇಟಿ ನೀಡಿದರು.
ಕುಟುಂಬ ಸಮೇತ ಬಂದಿರುವ ಅವರು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇಗುಲ, ಕಲ್ಲಿನ ರಥ, ಸಪ್ತಸ್ವರ ಮಂಟಪ, ಉಗ್ರನರಸಿಂಹ ಸ್ಮಾರಕಗಳನ್ನು ಕಣ್ತುಂಬಿಕೊಂಡರು.
ವಿರೂಪಾಕ್ಷ ದೇವಾಲಯದ ಆವರಣದಲ್ಲಿನ ಆನೆ ‘ಲಕ್ಷ್ಮಿ’ಯಿಂದ ಆಶೀರ್ವಾದ ಪಡೆದರು. ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಬುಧವಾರ (ಮಾ.24) ಕೂಡ ಹಂಪಿ ಪ್ರವಾಸ ಮುಂದುವರೆಸಲಿದ್ದಾರೆ.