<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯಾದ್ಯಂತ ಬಾಲ್ಯವಿವಾಹ, ಪೋಕ್ಸೊ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಪಿಡಿಒಗಳ ಪಾತ್ರ ಪ್ರಮುಖವಾಗಿದೆ. ಅವರು ಸಕ್ರಿಯವಾಗಿದ್ದರೆ ಈ ಪಿಡುಗುಗಳಿಗೆ ಕಡಿವಾಣ ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಹೇಳಿದರು.</p>.<p>ಇಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ, ಪೋಕ್ಸೊ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕುರಿತು ಪಿಡಿಒಗಳಿಗೆ ಏರ್ಪಡಿಸಿದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಇಂದಿಗೂ ಜಿಲ್ಲೆ ಹಾಗೂ ರಾಜ್ಯಾಜ್ಯದಾದ್ಯಂತ ಬಾಲ್ಯವಿವಾಹ, ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಇಂತಹ ಪ್ರಕರಣಗಳು ದಾಖಲಾಗದಂತೆ ಜಾಗ್ರತೆಯಿಂದ ಕಾರ್ಯನಿರ್ವಹಿಸವಬೇಕಿದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಭಟ್ ಅವರು ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯಾದ್ಯಂತ ಬಾಲ್ಯವಿವಾಹ, ಪೋಕ್ಸೊ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಪಿಡಿಒಗಳ ಪಾತ್ರ ಪ್ರಮುಖವಾಗಿದೆ. ಅವರು ಸಕ್ರಿಯವಾಗಿದ್ದರೆ ಈ ಪಿಡುಗುಗಳಿಗೆ ಕಡಿವಾಣ ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಹೇಳಿದರು.</p>.<p>ಇಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ, ಪೋಕ್ಸೊ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕುರಿತು ಪಿಡಿಒಗಳಿಗೆ ಏರ್ಪಡಿಸಿದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಇಂದಿಗೂ ಜಿಲ್ಲೆ ಹಾಗೂ ರಾಜ್ಯಾಜ್ಯದಾದ್ಯಂತ ಬಾಲ್ಯವಿವಾಹ, ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಇಂತಹ ಪ್ರಕರಣಗಳು ದಾಖಲಾಗದಂತೆ ಜಾಗ್ರತೆಯಿಂದ ಕಾರ್ಯನಿರ್ವಹಿಸವಬೇಕಿದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಭಟ್ ಅವರು ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>