<p><strong>ಹೊಸಪೇಟೆ (ವಿಜಯನಗರ):</strong> ಪೌರ ವೃಂದದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಸತತ ಎರಡನೇ ದಿನವಾದ ಬುಧವಾರ ಸಹ ತಮ್ಮ ಮುಷ್ಕರ ಮುಂದುವರಿಸಿದ್ದಾರೆ.</p><p>ನೀರು ಪೂರೈಕೆ, ಬೀದಿ ದೀಪ ನಿರ್ವಹಣೆಯನ್ನು ಬಿಟ್ಟು ಉಳಿದ ಯಾವ ಕೆಲಸವನ್ನೂ ಸಿಬ್ಬಂದಿ ಮಾಡುತ್ತಿಲ್ಲ. ಹೀಗಾಗಿ ನಗರ ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಕಸದ ರಾಶಿ ಎತ್ತುವವರೇ ಇಲ್ಲದೆ ಇಡೀ ನಗರ, ಪಟ್ಟಣ ಪ್ರದೇಶಗಳು ಕಸಮಯವಾಗಿವೆ.</p><p>ಮಂಗಳವಾರ ಬೆಳಿಗ್ಗೆಯಿಂದ ಸಿಬ್ಬಂದಿ ಮುಷ್ಕರ ಆರಂಭಿಸಿದ್ದರು. ನಗರದಲ್ಲಿ ರಾತ್ರಿ ಸಹ ಧರಣಿ ಮುಂದುವರಿಯುವ ಮೂಲಕ ಅಹೋರಾತ್ರಿ ಪ್ರತಿಭಟನೆ ನಡೆಯಿತು. </p><p>‘ಬುಧವಾರ ಸಹ ಸಿಬ್ಬಂದಿ ಮುಷ್ಕರದಲ್ಲಿ ತೊಡಗಿದ್ದಾರೆ. ಶೇ 50ರಷ್ಟು ಮಂದಿ ಕೆಲಸಕ್ಕೆ ಬನ್ನಿ ಎಂದು ಹೇಳಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ’ ಎಂದು ನಗರಸಭೆ ಆಯುಕ್ತ ಸಿ.ಚಂದ್ರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>ಪ್ರಮುಖ ಬೇಡಿಕೆಗಳು</strong></p><p>* ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು</p><p>* ಕೆಜಿಐಡಿ, ಜಿಪಿಎಸ್ ಜ್ಯೋತಿ ಸಂಜೀವಿನಿ ಸಹಿತ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಪೌರ ನೌಕರರಿಗೂ ಜಾರಿ ಮಾಡುವುದು</p><p>* ಹೊರಗುತ್ತಿಗೆ ಮೇಲೆ ಕೆಲಸ ಮಾಡುವ ನೀರು ಸರಬರಾಜು ಸಿಬ್ಬಂದಿ, ಲೋಡರ್ಸ್, ಕ್ಲೀನರ್ಸ್, ಪೌರಕಾರ್ಮಿಕರು, ಸೂಪರ್ವೈಸರ್, ಕಂಪ್ಯೂಟರ್ ಆಪರೇಟರ್, ಜ್ಯೂನಿಯರ್ ಪ್ರೋಗ್ರಾಮರ್, ಇತರ ಗುತ್ತಿಗೆ/ಹೊರಗುತ್ತಿಗೆ ಸಿಬ್ಬಂದಿಗೆ ನೇರಪಾವತಿ ವೇತನ ವ್ಯವಸ್ಥೆ ಕಲ್ಪಿಸುವುದು, ಕಾಯಂ ಮಾಡುವುದು</p><p>*2022–23ನೇ ಸಾಲಿನಲ್ಲಿ ವಿಶೇಷ ನೇಮಕಾತಿಯಡಿಯಲ್ಲಿ ನೇಮಕಗೊಂಡವರಿಗೆ ಸ್ಥಳೀಯ ನಿಧಿಯಡಿಯಲ್ಲಿ ವೇತನ ಪಡೆಯಲು ಆದೇಶಿಸಿದ್ದನ್ನು ರದ್ದುಪಡಿಸಿ ಎಸ್ಎಫ್ಸಿ ಅನುದಾನದಡಿ ವೇತನ ಪಾವತಿ ಮಾಡುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಪೌರ ವೃಂದದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಸತತ ಎರಡನೇ ದಿನವಾದ ಬುಧವಾರ ಸಹ ತಮ್ಮ ಮುಷ್ಕರ ಮುಂದುವರಿಸಿದ್ದಾರೆ.</p><p>ನೀರು ಪೂರೈಕೆ, ಬೀದಿ ದೀಪ ನಿರ್ವಹಣೆಯನ್ನು ಬಿಟ್ಟು ಉಳಿದ ಯಾವ ಕೆಲಸವನ್ನೂ ಸಿಬ್ಬಂದಿ ಮಾಡುತ್ತಿಲ್ಲ. ಹೀಗಾಗಿ ನಗರ ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಕಸದ ರಾಶಿ ಎತ್ತುವವರೇ ಇಲ್ಲದೆ ಇಡೀ ನಗರ, ಪಟ್ಟಣ ಪ್ರದೇಶಗಳು ಕಸಮಯವಾಗಿವೆ.</p><p>ಮಂಗಳವಾರ ಬೆಳಿಗ್ಗೆಯಿಂದ ಸಿಬ್ಬಂದಿ ಮುಷ್ಕರ ಆರಂಭಿಸಿದ್ದರು. ನಗರದಲ್ಲಿ ರಾತ್ರಿ ಸಹ ಧರಣಿ ಮುಂದುವರಿಯುವ ಮೂಲಕ ಅಹೋರಾತ್ರಿ ಪ್ರತಿಭಟನೆ ನಡೆಯಿತು. </p><p>‘ಬುಧವಾರ ಸಹ ಸಿಬ್ಬಂದಿ ಮುಷ್ಕರದಲ್ಲಿ ತೊಡಗಿದ್ದಾರೆ. ಶೇ 50ರಷ್ಟು ಮಂದಿ ಕೆಲಸಕ್ಕೆ ಬನ್ನಿ ಎಂದು ಹೇಳಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ’ ಎಂದು ನಗರಸಭೆ ಆಯುಕ್ತ ಸಿ.ಚಂದ್ರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>ಪ್ರಮುಖ ಬೇಡಿಕೆಗಳು</strong></p><p>* ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು</p><p>* ಕೆಜಿಐಡಿ, ಜಿಪಿಎಸ್ ಜ್ಯೋತಿ ಸಂಜೀವಿನಿ ಸಹಿತ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಪೌರ ನೌಕರರಿಗೂ ಜಾರಿ ಮಾಡುವುದು</p><p>* ಹೊರಗುತ್ತಿಗೆ ಮೇಲೆ ಕೆಲಸ ಮಾಡುವ ನೀರು ಸರಬರಾಜು ಸಿಬ್ಬಂದಿ, ಲೋಡರ್ಸ್, ಕ್ಲೀನರ್ಸ್, ಪೌರಕಾರ್ಮಿಕರು, ಸೂಪರ್ವೈಸರ್, ಕಂಪ್ಯೂಟರ್ ಆಪರೇಟರ್, ಜ್ಯೂನಿಯರ್ ಪ್ರೋಗ್ರಾಮರ್, ಇತರ ಗುತ್ತಿಗೆ/ಹೊರಗುತ್ತಿಗೆ ಸಿಬ್ಬಂದಿಗೆ ನೇರಪಾವತಿ ವೇತನ ವ್ಯವಸ್ಥೆ ಕಲ್ಪಿಸುವುದು, ಕಾಯಂ ಮಾಡುವುದು</p><p>*2022–23ನೇ ಸಾಲಿನಲ್ಲಿ ವಿಶೇಷ ನೇಮಕಾತಿಯಡಿಯಲ್ಲಿ ನೇಮಕಗೊಂಡವರಿಗೆ ಸ್ಥಳೀಯ ನಿಧಿಯಡಿಯಲ್ಲಿ ವೇತನ ಪಡೆಯಲು ಆದೇಶಿಸಿದ್ದನ್ನು ರದ್ದುಪಡಿಸಿ ಎಸ್ಎಫ್ಸಿ ಅನುದಾನದಡಿ ವೇತನ ಪಾವತಿ ಮಾಡುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>