ಸಂತೋಷ್ ಪಾಟೀಲ ಸಾವಿನ ನಂತರ ಪ್ರಕರಣ ದಾಖಲಾಗಿದೆ. ಪ್ರಾಮಾಣಿಕ, ಪಾರದರ್ಶಕವಾಗಿ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗಣಪತಿ ಅವರು ಕೆ.ಜೆ. ಜಾರ್ಜ್ ವಿರುದ್ಧ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಅವರ ವಿರುದ್ಧ ಎಫ್ ಐ ಆರ್ ನಲ್ಲಿ ಹೆಸರಿರಲಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಎಲ್ಲಿದೆ ಎಂದು ಇಲ್ಲಿ ಸುದ್ದಿಗಾರರನ್ನು ಕೇಳಿದರು.