<p>ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.</p>.<p>ಮಾರ್ಚ್ 22ರಂದು ಸಂಜೆ ತಂದೆಯೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಪ್ರಥಮ ವರ್ಷದ ಬಿಇ ವಿದ್ಯಾರ್ಥಿ ಎನ್.ಜಿ. ಮನು, ದ್ವಿತೀಯ ಪಿಯು ವಿದ್ಯಾರ್ಥಿ ಎನ್.ಜಿ. ಪ್ರಜ್ವಲ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದರು.</p>.<p>ಈ ಬಗ್ಗೆ ನಾನು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರೂ ಪರಿಹಾರ ಹಣ ಮುಂಜೂರು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮಲ್ಲಿಕಾರ್ಜುನ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-896140918</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.</p>.<p>ಮಾರ್ಚ್ 22ರಂದು ಸಂಜೆ ತಂದೆಯೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಪ್ರಥಮ ವರ್ಷದ ಬಿಇ ವಿದ್ಯಾರ್ಥಿ ಎನ್.ಜಿ. ಮನು, ದ್ವಿತೀಯ ಪಿಯು ವಿದ್ಯಾರ್ಥಿ ಎನ್.ಜಿ. ಪ್ರಜ್ವಲ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದರು.</p>.<p>ಈ ಬಗ್ಗೆ ನಾನು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರೂ ಪರಿಹಾರ ಹಣ ಮುಂಜೂರು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮಲ್ಲಿಕಾರ್ಜುನ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-896140918</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>