ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

Last Updated 7 ಏಪ್ರಿಲ್ 2023, 13:32 IST
ಅಕ್ಷರ ಗಾತ್ರ

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಪಟ್ಟಣದ ಗವಿಸಿದ್ಧೇಶ್ವರ ಶಾಖಾ ಮಠದ ಆವರಣದಲ್ಲಿರುವ ತೆಂಗಿನ ಮರಕ್ಕೆ ಶುಕ್ರವಾರ ಸಿಡಿಲು ಎರಗಿ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಜರುಗಿದೆ.

ಪಟ್ಟಣದಲ್ಲಿ ಮಧ್ಯಾಹ್ನ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ತುಂತುರು ಮಳೆ ಸುರಿಯಿತು. ಈ ವೇಳೆ ಗವಿಮಠದ ಆವರಣದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಎರಗಿ ಬೆಂಕಿ ಹೊತ್ತಿಕೊಂಡಿತು. 15 ನಿಮಿಷ ಕಾಲ ಮರ ಹೊತ್ತಿ ಉರಿಯಿತು. ಮಠದಲ್ಲಿದ್ದ ಭಕ್ತರು, ನೆರೆಹೊರೆಯವರು ಬೆಂಕಿ ನಂದಿಸಿದರು.

ಸಿಡಿಲು ಎರಗಿದ ಸಂದರ್ಭದಲ್ಲಿ ಮಠದ ಪ್ರಾಂಗಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಭಕ್ತರು, ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ. ಪವಾಡ ಸದೃಶ ರೀತಿಯಲ್ಲಿ ಎಲ್ಲರೂ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT