ಕೊಟ್ಟೂರು (ವಿಜಯನಗರ ಜಿಲ್ಲೆ): ಟಿಪ್ಪು ಸುಲ್ತಾನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಹ್ಯಾಳ್ಯಾ ಗ್ರಾಮದ ಶಾಂತೇಶ್ ಸುರಪುರ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಉಲ್ತಾನ್ 'ಮೈಸೂರ್ ಟೈಗರ್ ಅಲ್ಲ ಲೇಡಿಸ್ ಟೈಲರ್' ಎಂದು ಪೋಸ್ಟ್ ಮಾಡಿದ್ದಾರೆ.
ಉದ್ದೇಶಪೂರ್ವಕವಾಗಿ ಮಾನಹಾನಿಕರ ಪೋಸ್ಟ್ ಮಾಡಿದ್ದರಿಂದ ಬುಧವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರುತಿಳಿಸಿದ್ದಾರೆ.