‘ಬಡ್ತಿಗೆ ಲಂಚ, ಪಿಂಚಣಿಗೆ ಕಮಿಷನ್’, ‘ಶಿಷ್ಯವೇತನಕ್ಕೂ ತೆರಬೇಕು ಹಣ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಈಚೆಗೆ ಪ್ರಕಟಿಸಿದ್ದ ವರದಿ ಹಿನ್ನೆಲೆಯಲ್ಲಿ ಮಂಗಳವಾರ ಬೋಧಕ, ಬೋಧಕೇತರ ಸಿಬ್ಬಂದಿ ವಿಶ್ವವಿದ್ಯಾಲಯದಲ್ಲಿ ಸಭೆ ಸೇರಿ, ಚರ್ಚಿಸಿ ಆಗ್ರಹಿಸಿದರು. ಸಭೆ ಬಳಿಕ ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ ಅವರಿಗೆ ಮನವಿ ಪತ್ರ ಸಲ್ಲಿಸಿದರು.