‘ಮಧ್ಯಪ್ರದೇಶದಲ್ಲಿ ಬುಧವಾರ ನಿರುದ್ಯೋಗವನ್ನು ವಿರೋಧಿಸಿ ಮತ್ತು ಉದ್ಯೋಗ ಕೊಡುವಂತೆ ಆಗ್ರಹಿಸಿ ‘ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಷನ್’ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯು ಅತ್ಯಂತ ಶಾಂತಿಯುತವಾಗಿ ನಡೆಯುತ್ತಿತ್ತು. ಪೊಲೀಸರು ಏಕಾಏಕಿ ಅವರ ಮೇಲೆ ಲಾಠಿ ಪ್ರಹಾರ ನಡೆಸಿ ಬಂಧಿಸಿರುವುದು ಸರಿಯಲ್ಲ’ ಎಂದು ಸಂಘಟನೆಯ ಮುಖಂಡ ಎನ್.ಎಲ್. ಪಂಪಾಪತಿ ತಿಳಿಸಿದ್ದಾರೆ.