<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): </strong>ಕಾಂಗ್ರೆಸ್ ಶಾಸಕ ಎಲ್.ಬಿ.ಪಿ. ಭೀಮ ನಾಯ್ಕ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿಕ್ಷಕರಿಗೆ ಬೆಳ್ಳಿ ನಾಣ್ಯ ಕಾಣಿಕೆ ರೂಪದಲ್ಲಿ ನೀಡಿದ್ದಾರೆ.</p>.<p>ತಾಲ್ಲೂಕು ಆಡಳಿತದಿಂದ ಸೋಮವಾರ ಪಟ್ಟಣದಲ್ಲಿ ಶಿಕ್ಷಕರ ದಿನಾಚರಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲೇ ಶಾಸಕರು ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ, ನಿವೃತ್ತ ಶಿಕ್ಷಕರಿಗೆ ನಾಣ್ಯ ವಿತರಿಸಿದ್ದಾರೆ. ನಾಣ್ಯ ಏಳು ಗ್ರಾಂ ತೂಕ ಹೊಂದಿದೆ.</p>.<p>ನಾಣ್ಯದ ಒಂದು ಬದಿಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವಿದ್ದರೆ, ಇನ್ನೊಂದು ಬದಿಯಲ್ಲಿ ಶಾಸಕರ ಹೆಸರಿದೆ.</p>.<p>‘ಕೋವಿಡ್ನಿಂದ ಎರಡು ವರ್ಷ ಶಿಕ್ಷಕರ ದಿನ ಆಚರಿಸಿರಲಿಲ್ಲ. ಶಿಕ್ಷಕರಿಗೆ ಗೌರವ ಸಲ್ಲಿಸಲು ಕ್ಷೇತ್ರದ ಎಲ್ಲ ಶಿಕ್ಷಕರಿಗೆ ಬೆಳ್ಳಿ ನಾಣ್ಯ ನೀಡಲಾಗಿದೆ. ಇದರಲ್ಲಿ ಬೇರೆ ಉದ್ದೇಶ ಇಲ್ಲ’ ಎಂದು ಭೀಮ ನಾಯ್ಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಈ ರೀತಿ ದೇಣಿಗೆ, ಕಾಣಿಕೆ ಕೊಡುವುದು ಇದ್ದರೆ ಅನುಮತಿ ಪಡೆಯಬೇಕು. ರಾಜ್ಯ ಸರ್ಕಾರಿ ನೌಕರರು ₹5 ಸಾವಿರಕ್ಕಿಂತ ಮೇಲಿನ ಕಾಣಿಕೆ ಪಡೆಯಬೇಕಾದರೆ ಅನುಮತಿ ಪಡೆಯಬೇಕಾಗುತ್ತದೆ. ಡಿ.ಡಿ.ಪಿ.ಐ.ಗೆ ವಿಷಯ ತಿಳಿಸಿದ್ದರೋ ಅಥವಾ ಇಲ್ಲವೋ ನನಗೆ ಗೊತ್ತಿಲ್ಲ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.</p>.<p>‘ಬೆಳ್ಳಿ ನಾಣ್ಯ ವಿತರಿಸಿದ ವಿಷಯ ನನಗೆ ಗೊತ್ತಿಲ್ಲ. ನಮ್ಮಿಂದ ಅನುಮತಿಯೂ ಪಡೆದಿಲ್ಲ’ ಎಂದು ಡಿ.ಡಿ.ಪಿ.ಐ. ಜೆ. ಕೊಟ್ರೇಶ್ ಪ್ರತಿಕ್ರಿಯಿಸಿದರು.</p>.<p><strong>ಓದಿ...</strong></p>.<p><a href="https://www.prajavani.net/district/bengaluru-city/karnataka-rains-bangalore-rains-bangalore-flood-mp-tejasvi-surya-bjp-congress-politics-969682.html" target="_blank">ಬೆಂಗಳೂರು ಮಳೆಯಲ್ಲಿ ಮಸಾಲೆ ದೋಸೆ ತಿನ್ನಲು ಹೋದ ತೇಜಸ್ವಿ ವಿರುದ್ಧ ಕಾಂಗ್ರೆಸ್ ಗರಂ</a></p>.<p><a href="https://www.prajavani.net/district/bengaluru-city/mp-tejasvi-surya-inviting-people-to-eat-benne-dosa-in-between-bengaluru-flood-video-969649.html" target="_blank">ಬೆಂಗಳೂರು ಪ್ರವಾಹ: ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದ ತೇಜಸ್ವಿ ಸೂರ್ಯಗೆ ತರಾಟೆ</a></p>.<p><a href="https://www.prajavani.net/karnataka-news/karnataka-rains-rain-effects-in-bengaluru-congress-bjp-politics-r-ashok-basavaraj-bommai-969673.html" target="_blank">ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ ಈ ಮಾತು ಅಶೋಕ್ಗೆ ಹೇಳಿರಬೇಕು: ಕಾಂಗ್ರೆಸ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): </strong>ಕಾಂಗ್ರೆಸ್ ಶಾಸಕ ಎಲ್.ಬಿ.ಪಿ. ಭೀಮ ನಾಯ್ಕ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿಕ್ಷಕರಿಗೆ ಬೆಳ್ಳಿ ನಾಣ್ಯ ಕಾಣಿಕೆ ರೂಪದಲ್ಲಿ ನೀಡಿದ್ದಾರೆ.</p>.<p>ತಾಲ್ಲೂಕು ಆಡಳಿತದಿಂದ ಸೋಮವಾರ ಪಟ್ಟಣದಲ್ಲಿ ಶಿಕ್ಷಕರ ದಿನಾಚರಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲೇ ಶಾಸಕರು ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ, ನಿವೃತ್ತ ಶಿಕ್ಷಕರಿಗೆ ನಾಣ್ಯ ವಿತರಿಸಿದ್ದಾರೆ. ನಾಣ್ಯ ಏಳು ಗ್ರಾಂ ತೂಕ ಹೊಂದಿದೆ.</p>.<p>ನಾಣ್ಯದ ಒಂದು ಬದಿಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವಿದ್ದರೆ, ಇನ್ನೊಂದು ಬದಿಯಲ್ಲಿ ಶಾಸಕರ ಹೆಸರಿದೆ.</p>.<p>‘ಕೋವಿಡ್ನಿಂದ ಎರಡು ವರ್ಷ ಶಿಕ್ಷಕರ ದಿನ ಆಚರಿಸಿರಲಿಲ್ಲ. ಶಿಕ್ಷಕರಿಗೆ ಗೌರವ ಸಲ್ಲಿಸಲು ಕ್ಷೇತ್ರದ ಎಲ್ಲ ಶಿಕ್ಷಕರಿಗೆ ಬೆಳ್ಳಿ ನಾಣ್ಯ ನೀಡಲಾಗಿದೆ. ಇದರಲ್ಲಿ ಬೇರೆ ಉದ್ದೇಶ ಇಲ್ಲ’ ಎಂದು ಭೀಮ ನಾಯ್ಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಈ ರೀತಿ ದೇಣಿಗೆ, ಕಾಣಿಕೆ ಕೊಡುವುದು ಇದ್ದರೆ ಅನುಮತಿ ಪಡೆಯಬೇಕು. ರಾಜ್ಯ ಸರ್ಕಾರಿ ನೌಕರರು ₹5 ಸಾವಿರಕ್ಕಿಂತ ಮೇಲಿನ ಕಾಣಿಕೆ ಪಡೆಯಬೇಕಾದರೆ ಅನುಮತಿ ಪಡೆಯಬೇಕಾಗುತ್ತದೆ. ಡಿ.ಡಿ.ಪಿ.ಐ.ಗೆ ವಿಷಯ ತಿಳಿಸಿದ್ದರೋ ಅಥವಾ ಇಲ್ಲವೋ ನನಗೆ ಗೊತ್ತಿಲ್ಲ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.</p>.<p>‘ಬೆಳ್ಳಿ ನಾಣ್ಯ ವಿತರಿಸಿದ ವಿಷಯ ನನಗೆ ಗೊತ್ತಿಲ್ಲ. ನಮ್ಮಿಂದ ಅನುಮತಿಯೂ ಪಡೆದಿಲ್ಲ’ ಎಂದು ಡಿ.ಡಿ.ಪಿ.ಐ. ಜೆ. ಕೊಟ್ರೇಶ್ ಪ್ರತಿಕ್ರಿಯಿಸಿದರು.</p>.<p><strong>ಓದಿ...</strong></p>.<p><a href="https://www.prajavani.net/district/bengaluru-city/karnataka-rains-bangalore-rains-bangalore-flood-mp-tejasvi-surya-bjp-congress-politics-969682.html" target="_blank">ಬೆಂಗಳೂರು ಮಳೆಯಲ್ಲಿ ಮಸಾಲೆ ದೋಸೆ ತಿನ್ನಲು ಹೋದ ತೇಜಸ್ವಿ ವಿರುದ್ಧ ಕಾಂಗ್ರೆಸ್ ಗರಂ</a></p>.<p><a href="https://www.prajavani.net/district/bengaluru-city/mp-tejasvi-surya-inviting-people-to-eat-benne-dosa-in-between-bengaluru-flood-video-969649.html" target="_blank">ಬೆಂಗಳೂರು ಪ್ರವಾಹ: ಟೆಂಪ್ಟ್ ಆಗಿ ದೋಸೆ ತಿನ್ನಲು ಹೋದ ತೇಜಸ್ವಿ ಸೂರ್ಯಗೆ ತರಾಟೆ</a></p>.<p><a href="https://www.prajavani.net/karnataka-news/karnataka-rains-rain-effects-in-bengaluru-congress-bjp-politics-r-ashok-basavaraj-bommai-969673.html" target="_blank">ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ ಈ ಮಾತು ಅಶೋಕ್ಗೆ ಹೇಳಿರಬೇಕು: ಕಾಂಗ್ರೆಸ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>