<p><strong>ಹೊಸಪೇಟೆ (ವಿಜಯನಗರ</strong>): ‘ವಿಜಯನಗರ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಗುತ್ತಿಗೆದಾರರಿಗೆ ₹1,200 ಕೋಟಿ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿವೆ, ಈ ಜಿಲ್ಲೆಯೂ ಒಳಗೊಂಡಂತೆ ರಾಜ್ಯದಾದ್ಯಂತ ₹37,000 ಕೋಟಿ ಬಿಲ್ ಪಾವತಿ ಬಾಕಿ ಇದೆ. ತಕ್ಷಣ ಬಿಲ್ ಪಾವತಿ ಮಾಡಲು ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.</p>.<p>ರಾಜ್ಯದ 18 ಜಿಲ್ಲೆಗಳ ಪ್ರವಾಸ ಮುಗಿಸಿದ ಬಳಿಕ 19ನೇ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಭಾಗವಾಗಿ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುತ್ತಿಗೆದಾರರು ಬಹಳ ಕಷ್ಟದಲ್ಲಿದ್ದಾರೆ, ಆತ್ಮಹತ್ಯೆಯ ಹಾದಿ ತುಳಿಯುವ ಹಂತಕ್ಕೆ ಬಂದಿದ್ದಾರೆ, ಸರ್ಕಾರ ಇನ್ನಷ್ಟು ತಾಳ್ಮೆ ಪರೀಕ್ಷೆ ಮಾಡಬಾರದು’ ಎಂದರು.</p>.<p>‘ಹಾಲಿ ಸರ್ಕಾರ ಈ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿರುವುದರಲ್ಲಿ ಅರ್ಥವಿಲ್ಲ. ಈ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಂದ ಸುಮಾರು ₹20 ಸಾವಿರ ಕೋಟಿ ಸಹಿತ ಈಗಿನ ಸರ್ಕಾರದ ಅವಧಿಯಲ್ಲಿ ಮತ್ತೆ 17,000 ಕೋಟಿ ಬರಬೇಕಿದೆ. ಕಳೆದ ಮೂರು ವರ್ಷಗಳಿಂದಲೂ ಬಿಲ್ ಪಾವತಿ ಬಾಕಿ ಇದೆ. ಈಗ ಹಿಂದಿನ ಸರ್ಕಾರವನ್ನು ದೂಷಿಸಿ ಮಾತನಾಡುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಹೇಳಿದರು.</p>.<p>‘ರಾಜ್ಯದಲ್ಲಿ ತುಂಡು ಗುತ್ತಿಗೆ ಪದ್ಧತಿ ಈಗ ಇಲ್ಲ. ಪ್ಯಾಕೇಜ್ ಗುತ್ತಿಗೆ ಕ್ರಮವನ್ನು ಅನುಸರಿಸುವುದಕ್ಕೆ ಸಂಘದ ಪ್ರಬಲ ವಿರೋಧ ಇದೆ’ ಎಂದರು.</p>.<p><strong>ಬಾಕಿ ಉಳಿಸಿಕೊಂಡ ಇಲಾಖೆಗಳು:</strong> ಲೋಕೋಪಯೋಗಿ ಇಲಾಖೆ ₹8,300 ಕೋಟಿ, ಜಲಸಂಪನ್ಮೂಲ ಇಲಾಖೆ ₹13,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ₹3,800 ಕೋಟಿ, ಸಣ್ಣ ನೀರಾವರಿ ಇಲಾಖೆ ₹3,000, ನಗರಾಭಿವೃದ್ಧಿ ಇಲಾಖೆ ₹ 2,000, ವಸತಿ, ವಕ್ಫ್ ಇಲಾಖೆ ₹2,600 ಕೋಟಿ ಕಾರ್ಮಿಕ ಇಲಾಖೆ ₹2,000, ಬಿಬಿಎಂಪಿ ₹ 1,6000 ಕೋಟಿ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ನಾಗಪ್ಪ, ರಾಜಶೇಖರ ಪಾಟೀಲ್, ಜಗದೀಶ್, ಕಿಚಡಿ ಶ್ರೀನಿವಾಸ್, ಕೇಶವ ರೆಡ್ಡಿ, ನಾಗರಾಜ, ಮಹೇಶ್ ಹಲಗೇರಿ, ಉಮಾಕಾಂತ್, ದೇವಿಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ</strong>): ‘ವಿಜಯನಗರ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಗುತ್ತಿಗೆದಾರರಿಗೆ ₹1,200 ಕೋಟಿ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿವೆ, ಈ ಜಿಲ್ಲೆಯೂ ಒಳಗೊಂಡಂತೆ ರಾಜ್ಯದಾದ್ಯಂತ ₹37,000 ಕೋಟಿ ಬಿಲ್ ಪಾವತಿ ಬಾಕಿ ಇದೆ. ತಕ್ಷಣ ಬಿಲ್ ಪಾವತಿ ಮಾಡಲು ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.</p>.<p>ರಾಜ್ಯದ 18 ಜಿಲ್ಲೆಗಳ ಪ್ರವಾಸ ಮುಗಿಸಿದ ಬಳಿಕ 19ನೇ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಭಾಗವಾಗಿ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುತ್ತಿಗೆದಾರರು ಬಹಳ ಕಷ್ಟದಲ್ಲಿದ್ದಾರೆ, ಆತ್ಮಹತ್ಯೆಯ ಹಾದಿ ತುಳಿಯುವ ಹಂತಕ್ಕೆ ಬಂದಿದ್ದಾರೆ, ಸರ್ಕಾರ ಇನ್ನಷ್ಟು ತಾಳ್ಮೆ ಪರೀಕ್ಷೆ ಮಾಡಬಾರದು’ ಎಂದರು.</p>.<p>‘ಹಾಲಿ ಸರ್ಕಾರ ಈ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿರುವುದರಲ್ಲಿ ಅರ್ಥವಿಲ್ಲ. ಈ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಂದ ಸುಮಾರು ₹20 ಸಾವಿರ ಕೋಟಿ ಸಹಿತ ಈಗಿನ ಸರ್ಕಾರದ ಅವಧಿಯಲ್ಲಿ ಮತ್ತೆ 17,000 ಕೋಟಿ ಬರಬೇಕಿದೆ. ಕಳೆದ ಮೂರು ವರ್ಷಗಳಿಂದಲೂ ಬಿಲ್ ಪಾವತಿ ಬಾಕಿ ಇದೆ. ಈಗ ಹಿಂದಿನ ಸರ್ಕಾರವನ್ನು ದೂಷಿಸಿ ಮಾತನಾಡುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಹೇಳಿದರು.</p>.<p>‘ರಾಜ್ಯದಲ್ಲಿ ತುಂಡು ಗುತ್ತಿಗೆ ಪದ್ಧತಿ ಈಗ ಇಲ್ಲ. ಪ್ಯಾಕೇಜ್ ಗುತ್ತಿಗೆ ಕ್ರಮವನ್ನು ಅನುಸರಿಸುವುದಕ್ಕೆ ಸಂಘದ ಪ್ರಬಲ ವಿರೋಧ ಇದೆ’ ಎಂದರು.</p>.<p><strong>ಬಾಕಿ ಉಳಿಸಿಕೊಂಡ ಇಲಾಖೆಗಳು:</strong> ಲೋಕೋಪಯೋಗಿ ಇಲಾಖೆ ₹8,300 ಕೋಟಿ, ಜಲಸಂಪನ್ಮೂಲ ಇಲಾಖೆ ₹13,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ₹3,800 ಕೋಟಿ, ಸಣ್ಣ ನೀರಾವರಿ ಇಲಾಖೆ ₹3,000, ನಗರಾಭಿವೃದ್ಧಿ ಇಲಾಖೆ ₹ 2,000, ವಸತಿ, ವಕ್ಫ್ ಇಲಾಖೆ ₹2,600 ಕೋಟಿ ಕಾರ್ಮಿಕ ಇಲಾಖೆ ₹2,000, ಬಿಬಿಎಂಪಿ ₹ 1,6000 ಕೋಟಿ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ನಾಗಪ್ಪ, ರಾಜಶೇಖರ ಪಾಟೀಲ್, ಜಗದೀಶ್, ಕಿಚಡಿ ಶ್ರೀನಿವಾಸ್, ಕೇಶವ ರೆಡ್ಡಿ, ನಾಗರಾಜ, ಮಹೇಶ್ ಹಲಗೇರಿ, ಉಮಾಕಾಂತ್, ದೇವಿಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>