‘ಈಗ ಸಮಗ್ರ ಕೃತಿಗಳಲ್ಲಿ 12ನೆಯ ಸಂಪುಟ ಮಾರಾಟ ಮಾಡದಂತೆ ನ್ಯಾಯಾಲಯ ತಡೆ ನೀಡಿದೆ. ಆನ್ಲೈನ್, ಆಫ್ಲೈನ್ ಹಾಗೂ ಯಾವುದೇ ಪುಸ್ತಕ ಮಳಿಗೆಯಲ್ಲಿ ಮಾರಾಟ ಮಾಡುವಂತಿಲ್ಲ. ಅಗತ್ಯ ಬಿದ್ದರೆ ಸಂಶೋಧನೆಯ ಉದ್ದೇಶಕ್ಕಾಗಿ ಮಾತ್ರ ಬಳಸಬಹುದು. ಈ ತಡೆಯಾಜ್ಞೆ ಆದೇಶ, ಪ್ರಕರಣ ಸಂಪೂರ್ಣ ಇತ್ಯರ್ಥಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ’ ಎಂದು ಪುಸ್ತಕಮನೆ ಹರಿಹರಪ್ರಿಯ ಅವರ ಪರ ವಾದ ಮಂಡಿಸುತ್ತಿರುವ ವಕೀಲ ಎಚ್.ಎಸ್. ವಿವೇಕಾನಂದ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.