‘ಡಿ.13ರಂದು ಅಕ್ರಮ ಮರಳು ಸಾಗಾಟ ಪ್ರಕರಣ ಕೈಬಿಡಲು ಕೂಡ್ಲಿಗಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ವೆಂಕಟೇಶ ನಾಯ್ಕ ಅವರಿಂದ ₹2.5 ಲಕ್ಷ ಲಂಚ ಪಡೆಯುತ್ತಿದ್ದಾಗ ಕೊಟ್ಟೂರು ಪೊಲೀಸ್ ಠಾಣೆಯ ಸಿಪಿಐ, ಪಿಎಸ್ಐ ನಾಗಪ್ಪ ಹಾಗೂ ನಾಲ್ವರು ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದರು. ಬಳಿಕ ನಾಗಪ್ಪ ಜೈಲು ಸೇರಿದ್ದರು. ಇಲಾಖೆ ಅವರನ್ನು ಕೆಲಸದಿಂದ ಅಮಾನತುಗೊಳಿಸಿತ್ತು. ಜಾಮೀನಿನ ಮೇಲೆ ಹೊರಬಂದ ನಾಗಪ್ಪ ಮತ್ತು ಅವರ ಬೆಂಬಲಿಗರು ಕೊಟ್ಟೂರು ಪಟ್ಟಣದಲ್ಲಿ ಗುರುವಾರ ರಾತ್ರಿ ಕರ್ಫ್ಯೂ ಉಲ್ಲಂಘಿಸಿ, ಡೋಲು ಬಾರಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಯಾರೊಬ್ಬರೂ ಮಾಸ್ಕ್ ಧರಿಸಿರಲಿಲ್ಲ. ಅಂತರ ಕಾಯ್ದುಕೊಂಡಿರಲಿಲ್ಲ’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.