ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಆಯಾ ಬಡಾವಣೆಗಳಲ್ಲಿ ಸುತ್ತಾಡಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ವ್ಯಾಪಾರಿಗಳು ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿಯೇ ನಿಂತುಕೊಂಡು, ಜನರನ್ನು ಸೇರಿಸಿಕೊಂಡು ಮಾರಾಟ ಮಾಡುತ್ತಿದ್ದಾರೆ. ಅಂತರ ಕಾಯ್ದುಕೊಳ್ಳದೇ ವ್ಯವಹರಿಸುತ್ತಿದ್ದಾರೆ.