ನಾಲ್ಕು ವರ್ಷಗಳಲ್ಲಿ ಯುದ್ಧ ಕೌಶಲ, ನೈಪುಣ್ಯತೆಗಳನ್ನು ಕಲಿಯಲು ಸಾಧ್ಯವಿಲ್ಲ. ‘ಅಗ್ನಿಪಥ್’ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸೇನೆಯಲ್ಲಿ ಗುತ್ತಿಗೆ ಆಧಾರಿತ ನೇಮಕಾತಿ ಇಡೀ ದೇಶಕ್ಕೆ ಅಪಾಯ ತಂದೊಡ್ಡಬಲ್ಲದು. ಕೇಂದ್ರ ಸರ್ಕಾರ ತಕ್ಷಣವೇ ಯೋಜನೆ ರದ್ದುಗೊಳಿಸಬೇಕು. ಕೋಮು ಸೌಹಾರ್ದತೆ ಕಾಪಾಡಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.