<p><strong>ಹೂವಿನಹಡಗಲಿ:</strong> ಟೂರ್ ಪ್ಯಾಕೇಜ್ ಹೆಸರಲ್ಲಿ ನೇಪಾಳಕ್ಕೆ ಕರೆದೊಯ್ದಿದ್ದ ಹಗರಿಬೊಮ್ಮನಹಳ್ಳಿಯ ಭರತ್, ಸಮೀರ್ ಎಂಬುವವರು ಕ್ಯಾಸಿನೋ ಜೂಜಾಟದಲ್ಲಿ ವಂಚಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪುರಸಭೆ ಸದಸ್ಯ ಎ.ಜೆ.ವೀರೇಶ್ ಶನಿವಾರ ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>‘ವಿದೇಶದಲ್ಲಿನ ನಾಲ್ಕು ದಿನಗಳ ಇವೆಂಟ್ಗೆ ಉಚಿತವಾಗಿ ಕರೆದೊಯ್ಯುತ್ತೇವೆ ಎಂದು ನಂಬಿಸಿ, ಭರತ್, ಸಮೀರ್ ಅವರು ಬೆಂಗಳೂರಿನಿಂದ ನೇಪಾಳದ ಕಠ್ಮಂಡುವಿಗೆ ವಿಮಾನದಲ್ಲಿ ಕರೆದೊಯ್ದಿದ್ದರು. ಅಲ್ಲಿನ ಖಾಸಗಿ ಹೋಟೆಲ್ನಲ್ಲಿ ಇಸ್ಪೀಟ್ ಜೂಜಾಟ ಏರ್ಪಡಿಸಿದ್ದರು. ನೀವು ಮದ್ಯದ ಅಮಲಿನಲ್ಲಿದ್ದಾಗ ₹37 ಲಕ್ಷ ಸಾಲ ನೀಡಿದ್ದು ಹಣ ವಾಪಸ್ ಕೊಡಬೇಕು, ಇಲ್ಲದಿದ್ದರೆ ಅಲ್ಲಿ ನೀವು ಮಹಿಳೆಯರೊಂದಿಗಿರುವ ವಿಡಿಯೊಗಳನ್ನು ಸಂಬಂಧಿಗಳಿಗೆ ಕಳಿಸುತ್ತೇವೆ ಎಂದು ಬೆದರಿಕೆಯೊಡ್ಡಿ ನನ್ನಿಂದ ₹30 ಲಕ್ಷ ಪಡೆದಿದ್ದು, ಇನ್ನೂ ₹7 ಲಕ್ಷ ನೀಡಲು ಒತ್ತಡ ಹೇರುತ್ತಿದ್ದಾರೆ’ ಎಂದು ವೀರೇಶ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ಟೂರ್ ಪ್ಯಾಕೇಜ್ ಹೆಸರಲ್ಲಿ ನೇಪಾಳಕ್ಕೆ ಕರೆದೊಯ್ದಿದ್ದ ಹಗರಿಬೊಮ್ಮನಹಳ್ಳಿಯ ಭರತ್, ಸಮೀರ್ ಎಂಬುವವರು ಕ್ಯಾಸಿನೋ ಜೂಜಾಟದಲ್ಲಿ ವಂಚಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪುರಸಭೆ ಸದಸ್ಯ ಎ.ಜೆ.ವೀರೇಶ್ ಶನಿವಾರ ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>‘ವಿದೇಶದಲ್ಲಿನ ನಾಲ್ಕು ದಿನಗಳ ಇವೆಂಟ್ಗೆ ಉಚಿತವಾಗಿ ಕರೆದೊಯ್ಯುತ್ತೇವೆ ಎಂದು ನಂಬಿಸಿ, ಭರತ್, ಸಮೀರ್ ಅವರು ಬೆಂಗಳೂರಿನಿಂದ ನೇಪಾಳದ ಕಠ್ಮಂಡುವಿಗೆ ವಿಮಾನದಲ್ಲಿ ಕರೆದೊಯ್ದಿದ್ದರು. ಅಲ್ಲಿನ ಖಾಸಗಿ ಹೋಟೆಲ್ನಲ್ಲಿ ಇಸ್ಪೀಟ್ ಜೂಜಾಟ ಏರ್ಪಡಿಸಿದ್ದರು. ನೀವು ಮದ್ಯದ ಅಮಲಿನಲ್ಲಿದ್ದಾಗ ₹37 ಲಕ್ಷ ಸಾಲ ನೀಡಿದ್ದು ಹಣ ವಾಪಸ್ ಕೊಡಬೇಕು, ಇಲ್ಲದಿದ್ದರೆ ಅಲ್ಲಿ ನೀವು ಮಹಿಳೆಯರೊಂದಿಗಿರುವ ವಿಡಿಯೊಗಳನ್ನು ಸಂಬಂಧಿಗಳಿಗೆ ಕಳಿಸುತ್ತೇವೆ ಎಂದು ಬೆದರಿಕೆಯೊಡ್ಡಿ ನನ್ನಿಂದ ₹30 ಲಕ್ಷ ಪಡೆದಿದ್ದು, ಇನ್ನೂ ₹7 ಲಕ್ಷ ನೀಡಲು ಒತ್ತಡ ಹೇರುತ್ತಿದ್ದಾರೆ’ ಎಂದು ವೀರೇಶ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>