ತುಂಗಭದ್ರಾ ನದಿಯಿಂದ ಹೊರಗೆ ಬಂದ ಬೃಹತ್ ಮೊಸಳೆ ಭತ್ತದ ಗದ್ದೆಯಲ್ಲಿ ಓಡಾಡುತಿತ್ತು. ಇದರಿಂದ ಈ ಭಾಗದ ರೈತರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ರೈತರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಹಗ್ಗದ ನೆರವಿನಿಂದ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.