<p>ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬುಧವಾರ ಸಂಜೆ ಕರಡಿಯೊಂದು ರೈತನ ಮೇಲೆ ದಾಳಿ ನಡೆಸಿದ್ದು, ರೈತನ ಕೈಗೆ ತೀವ್ರ ಗಾಯವಾಗಿದ್ದು, ಕಾಲಿಗೆ ಸಹ ಗಾಯವಾಗಿದೆ.</p><p>ರೈತ ಸಿ.ರಾಜಶೇಖರ ಗೌಡ ಅವರು ತಮ್ಮ ಕಬ್ಬಿನ ಹೊಲಕ್ಕೆ ನೀರು ಹಾಯಿಸಲು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಹೋಗಿದ್ದಾಗ ಕರಡಿ ಅವರ ಮೇಲೆ ದಾಳಿ ನಡೆಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಜಶೇಖರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಸ್ಥಳದಲ್ಲೇ ಇದ್ದು, ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ಆರ್ಎಫ್ಒ ಕೌಶಿಕ್ ದಳವಾಯಿ ತಿಳಿಸಿದರು.</p><p>ಎರಡನೇ ಪ್ರಕರಣ: ಬುಕ್ಕಸಾಗರ ಸಮೀಪದ ವೆಂಕಟಾಪುರ ಬಳಿ ಈಚೆಗೆ ಕರಡಿಯೊಂದು ರಾಯಪ್ಪ ಎಂಬುವವರ ಮೇಲೆ ದಾಳಿ ನಡೆಸಿತ್ತು. ಅವರ ಮುಖ, ಕಣ್ಣಿಗೆ ತೀವ್ರ ಗಾಯವಾಗಿತ್ತು. ಕೆಲವು ದಿನಗಳ ಹಿಂದೆಯಷ್ಟೇ ಅವರು ಅಸ್ಪತ್ರೆಯಿಂದ ಮನೆಗೆ ಬಂದಿದ್ದರು ಹಾಗೂ ಈಗಲೂ ಗಾಯದಿಂದ ಚೇತರಿಸುತ್ತಿದ್ದಾರೆ ಅಷ್ಟೇ. ಈ ಘಟನೆ ಮರೆಯುವ ಮೊದಲೇ ಮತ್ತೊಂದು ಕರಡಿ ದಾಳಿ ನಡೆದಿದೆ.</p><p>ರೈತರ ಆಗ್ರಹ: ಕರಡಿ ದಾಳಿಗೆ ಒಳಗಾದ ರೈತರಿಗೆ ಸೂಕ್ತ ಚಿಕಿತ್ಸೆ, ಪರಿಹಾರ ನೀಡಬೇಕು, ಕರಡಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಗಂಭೀರ ಪ್ರಯತ್ನ ನಡೆಸಬೇಕು ಎಂದು ಬುಕ್ಕಸಾಗರದ ರೈತ ಮುಖಂಡ ಎಲ್.ಎಸ್.ರುದ್ರಪ್ಪ ಒತ್ತಾಯಿಸಿದ್ದಾರೆ.</p><p>ಬುಕ್ಕಸಾಗರ ಸನಿಹದಲ್ಲೇ ಪಕ್ಕದಲ್ಲೇ ದರೋಜಿ ಕರಡಿಧಾಮ ಇದ್ದು, ಕೆಲವು ವರ್ಷಗಳ ಹಿಂದೆ ಕರಡಿ ದಾಳಿಯಿಂದ ಈ ಭಾಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅದರ ಹೊರತಾಗಿ ಮನುಷ್ಯರ ಮೇಲೆ ದಾಳಿ ನಡೆಸಿದ ಪ್ರಸಂಗ ಅಷ್ಟಾಗಿ ವರದಿಯಾಗಿರಲಿಲ್ಲ. ಆದರೆ ತಿಂಗಳಿಂದೀಚೆಗೆ ಪರಿಸ್ಥಿತಿ ಬದಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬುಧವಾರ ಸಂಜೆ ಕರಡಿಯೊಂದು ರೈತನ ಮೇಲೆ ದಾಳಿ ನಡೆಸಿದ್ದು, ರೈತನ ಕೈಗೆ ತೀವ್ರ ಗಾಯವಾಗಿದ್ದು, ಕಾಲಿಗೆ ಸಹ ಗಾಯವಾಗಿದೆ.</p><p>ರೈತ ಸಿ.ರಾಜಶೇಖರ ಗೌಡ ಅವರು ತಮ್ಮ ಕಬ್ಬಿನ ಹೊಲಕ್ಕೆ ನೀರು ಹಾಯಿಸಲು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಹೋಗಿದ್ದಾಗ ಕರಡಿ ಅವರ ಮೇಲೆ ದಾಳಿ ನಡೆಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಜಶೇಖರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಸ್ಥಳದಲ್ಲೇ ಇದ್ದು, ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ಆರ್ಎಫ್ಒ ಕೌಶಿಕ್ ದಳವಾಯಿ ತಿಳಿಸಿದರು.</p><p>ಎರಡನೇ ಪ್ರಕರಣ: ಬುಕ್ಕಸಾಗರ ಸಮೀಪದ ವೆಂಕಟಾಪುರ ಬಳಿ ಈಚೆಗೆ ಕರಡಿಯೊಂದು ರಾಯಪ್ಪ ಎಂಬುವವರ ಮೇಲೆ ದಾಳಿ ನಡೆಸಿತ್ತು. ಅವರ ಮುಖ, ಕಣ್ಣಿಗೆ ತೀವ್ರ ಗಾಯವಾಗಿತ್ತು. ಕೆಲವು ದಿನಗಳ ಹಿಂದೆಯಷ್ಟೇ ಅವರು ಅಸ್ಪತ್ರೆಯಿಂದ ಮನೆಗೆ ಬಂದಿದ್ದರು ಹಾಗೂ ಈಗಲೂ ಗಾಯದಿಂದ ಚೇತರಿಸುತ್ತಿದ್ದಾರೆ ಅಷ್ಟೇ. ಈ ಘಟನೆ ಮರೆಯುವ ಮೊದಲೇ ಮತ್ತೊಂದು ಕರಡಿ ದಾಳಿ ನಡೆದಿದೆ.</p><p>ರೈತರ ಆಗ್ರಹ: ಕರಡಿ ದಾಳಿಗೆ ಒಳಗಾದ ರೈತರಿಗೆ ಸೂಕ್ತ ಚಿಕಿತ್ಸೆ, ಪರಿಹಾರ ನೀಡಬೇಕು, ಕರಡಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಗಂಭೀರ ಪ್ರಯತ್ನ ನಡೆಸಬೇಕು ಎಂದು ಬುಕ್ಕಸಾಗರದ ರೈತ ಮುಖಂಡ ಎಲ್.ಎಸ್.ರುದ್ರಪ್ಪ ಒತ್ತಾಯಿಸಿದ್ದಾರೆ.</p><p>ಬುಕ್ಕಸಾಗರ ಸನಿಹದಲ್ಲೇ ಪಕ್ಕದಲ್ಲೇ ದರೋಜಿ ಕರಡಿಧಾಮ ಇದ್ದು, ಕೆಲವು ವರ್ಷಗಳ ಹಿಂದೆ ಕರಡಿ ದಾಳಿಯಿಂದ ಈ ಭಾಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅದರ ಹೊರತಾಗಿ ಮನುಷ್ಯರ ಮೇಲೆ ದಾಳಿ ನಡೆಸಿದ ಪ್ರಸಂಗ ಅಷ್ಟಾಗಿ ವರದಿಯಾಗಿರಲಿಲ್ಲ. ಆದರೆ ತಿಂಗಳಿಂದೀಚೆಗೆ ಪರಿಸ್ಥಿತಿ ಬದಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>