<p><strong>ಹರಪನಹಳ್ಳಿ</strong>: ಪಟ್ಟಣದ ಹರಿಹರ ರಸ್ತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಸತಿನಿಲಯಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಗುರುವಾರ ಜರುಗಿತು.</p><p>ಚಿಗಟೇರಿ ಅಂಬಮ್ಮ ಮತ್ತು ಹನುಮಂತಪ್ಪ ದತ್ತಿ, ಹಾಲ್ಯಾನಾಯ್ಕ ಲಕ್ಷರಿನಾಯ್ಕ ದತ್ತಿ, ಕಸಾಪ ದತ್ತಿ, ಬಾಗಳಿ ಕೆಂಚಮ್ಮ ಮಾಗಳದ ಮಲ್ಲಿಕಾರ್ಜುನಪ್ಪ ದತ್ತಿ, ಬಾಗಳಿ ರಾಮನಗೌಡ ಹಾಲಮ್ಮ ಚನ್ನನಗೌಡ ದತ್ತಿ ಆಶಯದಂತೆ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>ಉಪನ್ಯಾಸ ನೀಡಿದ ವಕೀಲ ಕಣಿವಿಹಳ್ಳಿ ಮಂಜುನಾಥ, ‘ಹರಪನಹಳ್ಳಿ ನೆಲದಲ್ಲಿ ಸಾಹಿತ್ಯ ಲೋಕದ ಭೀಮವ್ವ, ಸೋಬಾನೆ ಪದ ಪರಂಪರೆಯ ಎಲಿಸವ್ವನಂತಹ ಪ್ರತಿಭಾನ್ವಿತ ಮಹಿಳೆಯರು ಪ್ರತಿಭೆ ಮೆರೆದಿದ್ದಾರೆ. ಜನಪದ ಸಾಹಿತ್ಯದಲ್ಲಿರುವ ಮಾನವೀಯ, ನೈತಿಕ ಮೌಲ್ಯಗಳನ್ನು ಪ್ರಚುರ ಪಡಿಸುವ ಅಗತ್ಯವಿದೆ’ ಎಂದರು.</p><p>ಬಿಸಿಎಂ ವಿಸ್ತರಣಾಧಿಕಾರಿ ಭೀಮಪ್ಪ, ನಿಲಯ ಮೇಲ್ವಿಚಾರಕ ಬಿ.ಎಚ್.ಚಂದ್ರಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಉಚ್ಚಂಗೆಪ್ಪ ಮಾತನಾಡಿದರು. ಕಾರ್ಯದರ್ಶಿ ಆರ್.ಪದ್ಮರಾಜ್ ಜೈನ್, ಕೋಶಾಧಿಕಾರಿ ಕೆ.ರಾಘವೇಂದ್ರ ಶೆಟ್ಟಿ, ಎಸ್.ಮಕಬುಲ್ ಬಾಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ಪಟ್ಟಣದ ಹರಿಹರ ರಸ್ತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಸತಿನಿಲಯಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಗುರುವಾರ ಜರುಗಿತು.</p><p>ಚಿಗಟೇರಿ ಅಂಬಮ್ಮ ಮತ್ತು ಹನುಮಂತಪ್ಪ ದತ್ತಿ, ಹಾಲ್ಯಾನಾಯ್ಕ ಲಕ್ಷರಿನಾಯ್ಕ ದತ್ತಿ, ಕಸಾಪ ದತ್ತಿ, ಬಾಗಳಿ ಕೆಂಚಮ್ಮ ಮಾಗಳದ ಮಲ್ಲಿಕಾರ್ಜುನಪ್ಪ ದತ್ತಿ, ಬಾಗಳಿ ರಾಮನಗೌಡ ಹಾಲಮ್ಮ ಚನ್ನನಗೌಡ ದತ್ತಿ ಆಶಯದಂತೆ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>ಉಪನ್ಯಾಸ ನೀಡಿದ ವಕೀಲ ಕಣಿವಿಹಳ್ಳಿ ಮಂಜುನಾಥ, ‘ಹರಪನಹಳ್ಳಿ ನೆಲದಲ್ಲಿ ಸಾಹಿತ್ಯ ಲೋಕದ ಭೀಮವ್ವ, ಸೋಬಾನೆ ಪದ ಪರಂಪರೆಯ ಎಲಿಸವ್ವನಂತಹ ಪ್ರತಿಭಾನ್ವಿತ ಮಹಿಳೆಯರು ಪ್ರತಿಭೆ ಮೆರೆದಿದ್ದಾರೆ. ಜನಪದ ಸಾಹಿತ್ಯದಲ್ಲಿರುವ ಮಾನವೀಯ, ನೈತಿಕ ಮೌಲ್ಯಗಳನ್ನು ಪ್ರಚುರ ಪಡಿಸುವ ಅಗತ್ಯವಿದೆ’ ಎಂದರು.</p><p>ಬಿಸಿಎಂ ವಿಸ್ತರಣಾಧಿಕಾರಿ ಭೀಮಪ್ಪ, ನಿಲಯ ಮೇಲ್ವಿಚಾರಕ ಬಿ.ಎಚ್.ಚಂದ್ರಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಉಚ್ಚಂಗೆಪ್ಪ ಮಾತನಾಡಿದರು. ಕಾರ್ಯದರ್ಶಿ ಆರ್.ಪದ್ಮರಾಜ್ ಜೈನ್, ಕೋಶಾಧಿಕಾರಿ ಕೆ.ರಾಘವೇಂದ್ರ ಶೆಟ್ಟಿ, ಎಸ್.ಮಕಬುಲ್ ಬಾಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>