<p>ಹರಪನಹಳ್ಳಿ: ‘ಗ್ರಾಮ ಪಂಚಾಯಿತಿ ಆಡಳಿತ ವೈಖರಿ, ಅಧಿಕಾರಿಗಳ ಬದ್ಧತೆ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಸ್ಪಂದನೆ ದೊರೆತಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ’ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.</p>.<p>ತಾಲ್ಲೂಕಿನ ಕಂಚಿಕೇರೆ ಗ್ರಾಮದಲ್ಲಿ ವಿಜಯನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ವತಿಯಿಂದ ಸೋಮವಾರ ಆಯೋಜಿಸಿದ್ದ 2024– 25ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಕಂಚಿಕೆರೆ ಗ್ರಾಮ ಪಂಚಾಯಿತಿಗೆ ಅಭಿನಂದನಾ ಸಮಾರಂಭ ಜರುಗಿತು.</p>.<p>‘ಮಹಿಳೆಯರು ಕುಟುಂಬ ಜವಾಬ್ದಾರಿಯ ಜೊತೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಗ್ಯಾರಂಟಿ ಸಹಕಾರಿಯಾಗಿದೆ’ ಎಂದರು.</p>.<p>ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಮಾತನಾಡಿ, ‘ಹರಪನಹಳ್ಳಿ ಕ್ಷೇತ್ರದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ₹175 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಸ್ಮಶಾನ ಅಭಿವೃದ್ಧಿಯಲ್ಲಿ ಕರ್ನಾಟಕ ಮಾದರಿಯಾಗಿದೆ. 49 ಗ್ರಾಮಗಳ ಸ್ಮಶಾನ ಸ್ಥಳ ನಿಗದಿಯಾಗಿಲ್ಲ, ಪೂರ್ಣಗೊಳಿಸಲಾಗುವುದು. ಈ ನಡುವೆ ಕೇಂದ್ರ ಬಿಜೆಪಿ ಸರ್ಕಾರದ ವಿಬಿ-ಜಿ-ರಾಮ್ಜಿ ಕಾಯ್ದೆಯಿಂದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>ಪ್ರಾಸ್ತಾವಿಕ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ವೈ.ಎಚ್ ಚಂದ್ರಶೇಖರ್, ‘ಕಂಚಿಕೆರೆ, ಲಕ್ಷ್ಮೀಪುರ ಬೆಣ್ಣೆಹಳ್ಳಿ ನಿಗದಿಪಡಿಸಿದ ಮಾನದಂಡಗಳು ಯಶಸ್ವಿಗೊಳಿಸಿ ಪುರಸ್ಕಾರಕ್ಕೆ ಭಾಜನವಾಗಿವೆ ಹಾಗೂ ಮಹಿಳೆಯರಿಗೆ ಮೀಸಲಿಟ್ಟ ₹43 ಲಕ್ಷ ಹಣವನ್ನು ಸ್ವಸಹಾಯ ಸಂಘದಲ್ಲಿ ಯಶಸ್ಸು ಪಡೆದು, ₹ 1.66 ಕೋಟಿಗೆ ಹೆಚ್ಚಿಸಿಕೊಂಡಿದೆ ಎಂದರು.</p>.<p>ಉಪವಿಭಾಗಾಧಿಕಾರಿ ಟಿ.ಸುರೇಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಉದಯಶಂಕರ್, ದಿಶಾ ಸಮಿತಿ ನಾಮನಿರ್ದೇಶನ ಸದಸ್ಯ ರೆಡ್ಡಿ ಶಾಂತಕುಮಾರ್, ಮುಖಂಡ ಡಿ.ಅಬ್ದುಲ್ ರೆಹಮಾನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-25-1810880901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ‘ಗ್ರಾಮ ಪಂಚಾಯಿತಿ ಆಡಳಿತ ವೈಖರಿ, ಅಧಿಕಾರಿಗಳ ಬದ್ಧತೆ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಸ್ಪಂದನೆ ದೊರೆತಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ’ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.</p>.<p>ತಾಲ್ಲೂಕಿನ ಕಂಚಿಕೇರೆ ಗ್ರಾಮದಲ್ಲಿ ವಿಜಯನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ವತಿಯಿಂದ ಸೋಮವಾರ ಆಯೋಜಿಸಿದ್ದ 2024– 25ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಕಂಚಿಕೆರೆ ಗ್ರಾಮ ಪಂಚಾಯಿತಿಗೆ ಅಭಿನಂದನಾ ಸಮಾರಂಭ ಜರುಗಿತು.</p>.<p>‘ಮಹಿಳೆಯರು ಕುಟುಂಬ ಜವಾಬ್ದಾರಿಯ ಜೊತೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಗ್ಯಾರಂಟಿ ಸಹಕಾರಿಯಾಗಿದೆ’ ಎಂದರು.</p>.<p>ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಮಾತನಾಡಿ, ‘ಹರಪನಹಳ್ಳಿ ಕ್ಷೇತ್ರದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ₹175 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಸ್ಮಶಾನ ಅಭಿವೃದ್ಧಿಯಲ್ಲಿ ಕರ್ನಾಟಕ ಮಾದರಿಯಾಗಿದೆ. 49 ಗ್ರಾಮಗಳ ಸ್ಮಶಾನ ಸ್ಥಳ ನಿಗದಿಯಾಗಿಲ್ಲ, ಪೂರ್ಣಗೊಳಿಸಲಾಗುವುದು. ಈ ನಡುವೆ ಕೇಂದ್ರ ಬಿಜೆಪಿ ಸರ್ಕಾರದ ವಿಬಿ-ಜಿ-ರಾಮ್ಜಿ ಕಾಯ್ದೆಯಿಂದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>ಪ್ರಾಸ್ತಾವಿಕ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ವೈ.ಎಚ್ ಚಂದ್ರಶೇಖರ್, ‘ಕಂಚಿಕೆರೆ, ಲಕ್ಷ್ಮೀಪುರ ಬೆಣ್ಣೆಹಳ್ಳಿ ನಿಗದಿಪಡಿಸಿದ ಮಾನದಂಡಗಳು ಯಶಸ್ವಿಗೊಳಿಸಿ ಪುರಸ್ಕಾರಕ್ಕೆ ಭಾಜನವಾಗಿವೆ ಹಾಗೂ ಮಹಿಳೆಯರಿಗೆ ಮೀಸಲಿಟ್ಟ ₹43 ಲಕ್ಷ ಹಣವನ್ನು ಸ್ವಸಹಾಯ ಸಂಘದಲ್ಲಿ ಯಶಸ್ಸು ಪಡೆದು, ₹ 1.66 ಕೋಟಿಗೆ ಹೆಚ್ಚಿಸಿಕೊಂಡಿದೆ ಎಂದರು.</p>.<p>ಉಪವಿಭಾಗಾಧಿಕಾರಿ ಟಿ.ಸುರೇಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಉದಯಶಂಕರ್, ದಿಶಾ ಸಮಿತಿ ನಾಮನಿರ್ದೇಶನ ಸದಸ್ಯ ರೆಡ್ಡಿ ಶಾಂತಕುಮಾರ್, ಮುಖಂಡ ಡಿ.ಅಬ್ದುಲ್ ರೆಹಮಾನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-25-1810880901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>