ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ಎಎಸ್ ಐ) ಅನುಮತಿ ಇಲ್ಲದೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ.
ಹಂಪಿ ರಥಬೀದಿಯಲ್ಲಿ ಜನದಟ್ಟಣೆ ಬಹಳಷ್ಟು ಇರುತ್ತದೆ. ವ್ಯಾಪಾರಕ್ಕಾಗಿ ರಾತ್ರೋರಾತ್ರಿ ಮಳಿಗೆ ತೆರೆಯುತ್ತಾರೆ. ಅನುಮತಿ ಇಲ್ಲದೆ ರೆಸ್ಟೊರೆಂಟ್ ನಡೆಸಲಾಗುತ್ತಿದೆ ಎಂಬ ಮಾಹಿತಿ ಇದೆ. ಅದನ್ನು ಪರಿಶೀಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಹಂಪಿಯಲ್ಲಿ ಕುಡಿಯುವ ನೀರು, ಶೌಚಾಲಯದ ಸಮಸ್ಯೆ ಬಹಳ ವರ್ಷಗಳಿಂದ ಇದೆ. ಜಿಲ್ಲಾಡಳಿತವು ಪುರಾತತ್ವ ಇಲಾಖೆಯ ಗಮನಕ್ಕೆ ತಂದಿದೆ. ಹೊಸದಾಗಿ ಕೆಲವೆಡೆ ನಿರ್ಮಿಸಲಾಗುತ್ತಿದೆ. ಹಾಲಿ ಇರುವ ಶೌಚಾಲಯಗಳ ನಿರ್ವಹಣೆ ಸಮಸ್ಯೆ ಇದೆ. ಅವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ತಿಳಿಸಲಾಗುವುದು. ಬ್ಯಾಟರಿಚಾಲಿತ ವಾಹನಗಳ ಕೊರತೆ ನೀಗಿಸಲಾಗುವುದು ಎಂದರು.