ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಆಲಬೂರು ಗ್ರಾಮದಲ್ಲಿ ಮಾ. 19ರಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಗ್ರಾಮ ವಾಸ್ತವ್ಯ ಮಾಡುವರು.
ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಧಿಕಾರಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವರು. ಅದೇ ದಿನ ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರ ಕೆರೆ, ಹೂವಿನಹಡಗಲಿ ತಾಲ್ಲೂಕಿನ ಉತ್ತಂಗಿ, ಕೂಡ್ಲಿಗಿ ತಾಲ್ಲೂಕಿನ ಹುರುಳಿಯಾಳ್, ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿಯಲ್ಲಿ ತಹಶೀಲ್ದಾರ್ಗಳು ಗ್ರಾಮ ವಾಸ್ತವ್ಯ ಮಾಡುವರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.