<p><strong>ಹೊಸಪೇಟೆ (ವಿಜಯನಗರ): </strong>‘₹5 ಕೋಟಿ ವೆಚ್ಚದಲ್ಲಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿ ಸ್ನಾನಘಟ್ಟವನ್ನು ಅಭಿವೃದ್ಧಿ ಪಡಿಸಲಾಗುವುದು’ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಹಂಪಿ ವಿಶ್ವ ಪಾರಂಪರಿಕ ತಾಣ. ಅನುದಾನದ ಕೊರತೆಯಿಂದ ಸ್ನಾನಘಟ್ಟ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ. ಈಗ ನಾನೇ ಪ್ರವಾಸೋದ್ಯಮ ಸಚಿವನಾಗಿದ್ದೇನೆ. ಇಲಾಖೆಯಿಂದ ₹5 ಕೋಟಿಯಲ್ಲಿ ಸ್ನಾನಘಟ್ಟ, ತುಂಗಾ ಆರತಿಗೆ ವೇದಿಕೆ, ವಿದ್ಯುತ್ ದೀಪಗಳ ಅಳವಡಿಕೆ, ಸ್ನಾನಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ’ ಎಂದು ಹೇಳಿದರು.<br />‘ಆನೆಗೊಂದಿ ಮತ್ತು ಹಂಪಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿದರೆ ತಪ್ಪಿಲ್ಲ. ಎರಡೂ ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ಬರುತ್ತಾರೆ. ಅಭಿವೃದ್ಧಿ ಕೆಲಸಗಳು ಇನ್ನಷ್ಟು ಚುರುಕಾಗಿ ಆಗುತ್ತವೆ. ಅಧಿಕಾರ ವಿಕೇಂದ್ರೀಕರಣ ಆದಷ್ಟು ಒಳ್ಳೆಯದೇ’ ಎಂದು ಪ್ರತಿಕ್ರಿಯಿಸಿದರು.</p>.<p>‘ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಭೆ ಯಶಸ್ವಿಯಾಗಿ ಕೊನೆಗೊಂಡಿದೆ. ದೇಶದ ಒಟ್ಟು 19 ಸ್ಥಳಗಳನ್ನು ‘ಟೂರಿಸಂ ಐಕಾನಿಕ್’ ಸ್ಥಳಗಳೆಂದು ಘೋಷಿಸಲು ತೀರ್ಮಾನಿಸಲಾಗಿದೆ. ಅದರಲ್ಲಿ ಹಂಪಿ ಕೂಡ ಸೇರಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ₹400 ಕೋಟಿ ಮೊತ್ತದ ಯೋಜನೆ ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ನಗರದಲ್ಲಿ ಹಾದು ಹೋಗಿರುವ ವಿಜಯನಗರ ಉಪಕಾಲುವೆಗಳಿಗೆ ಚರಂಡಿ ನೀರು ಸೇರದಂತೆ ಯೋಜನೆ ರೂಪಿಸಲಾಗುತ್ತಿದೆ. ₹30 ಕೋಟಿಯಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>‘₹5 ಕೋಟಿ ವೆಚ್ಚದಲ್ಲಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿ ಸ್ನಾನಘಟ್ಟವನ್ನು ಅಭಿವೃದ್ಧಿ ಪಡಿಸಲಾಗುವುದು’ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಹಂಪಿ ವಿಶ್ವ ಪಾರಂಪರಿಕ ತಾಣ. ಅನುದಾನದ ಕೊರತೆಯಿಂದ ಸ್ನಾನಘಟ್ಟ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ. ಈಗ ನಾನೇ ಪ್ರವಾಸೋದ್ಯಮ ಸಚಿವನಾಗಿದ್ದೇನೆ. ಇಲಾಖೆಯಿಂದ ₹5 ಕೋಟಿಯಲ್ಲಿ ಸ್ನಾನಘಟ್ಟ, ತುಂಗಾ ಆರತಿಗೆ ವೇದಿಕೆ, ವಿದ್ಯುತ್ ದೀಪಗಳ ಅಳವಡಿಕೆ, ಸ್ನಾನಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ’ ಎಂದು ಹೇಳಿದರು.<br />‘ಆನೆಗೊಂದಿ ಮತ್ತು ಹಂಪಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿದರೆ ತಪ್ಪಿಲ್ಲ. ಎರಡೂ ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ಬರುತ್ತಾರೆ. ಅಭಿವೃದ್ಧಿ ಕೆಲಸಗಳು ಇನ್ನಷ್ಟು ಚುರುಕಾಗಿ ಆಗುತ್ತವೆ. ಅಧಿಕಾರ ವಿಕೇಂದ್ರೀಕರಣ ಆದಷ್ಟು ಒಳ್ಳೆಯದೇ’ ಎಂದು ಪ್ರತಿಕ್ರಿಯಿಸಿದರು.</p>.<p>‘ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಭೆ ಯಶಸ್ವಿಯಾಗಿ ಕೊನೆಗೊಂಡಿದೆ. ದೇಶದ ಒಟ್ಟು 19 ಸ್ಥಳಗಳನ್ನು ‘ಟೂರಿಸಂ ಐಕಾನಿಕ್’ ಸ್ಥಳಗಳೆಂದು ಘೋಷಿಸಲು ತೀರ್ಮಾನಿಸಲಾಗಿದೆ. ಅದರಲ್ಲಿ ಹಂಪಿ ಕೂಡ ಸೇರಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ₹400 ಕೋಟಿ ಮೊತ್ತದ ಯೋಜನೆ ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ನಗರದಲ್ಲಿ ಹಾದು ಹೋಗಿರುವ ವಿಜಯನಗರ ಉಪಕಾಲುವೆಗಳಿಗೆ ಚರಂಡಿ ನೀರು ಸೇರದಂತೆ ಯೋಜನೆ ರೂಪಿಸಲಾಗುತ್ತಿದೆ. ₹30 ಕೋಟಿಯಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>