‘ಹಂಪಿ ವಿಶ್ವ ಪಾರಂಪರಿಕ ತಾಣ. ಅನುದಾನದ ಕೊರತೆಯಿಂದ ಸ್ನಾನಘಟ್ಟ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ. ಈಗ ನಾನೇ ಪ್ರವಾಸೋದ್ಯಮ ಸಚಿವನಾಗಿದ್ದೇನೆ. ಇಲಾಖೆಯಿಂದ ₹5 ಕೋಟಿಯಲ್ಲಿ ಸ್ನಾನಘಟ್ಟ, ತುಂಗಾ ಆರತಿಗೆ ವೇದಿಕೆ, ವಿದ್ಯುತ್ ದೀಪಗಳ ಅಳವಡಿಕೆ, ಸ್ನಾನಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ’ ಎಂದು ಹೇಳಿದರು.
‘ಆನೆಗೊಂದಿ ಮತ್ತು ಹಂಪಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿದರೆ ತಪ್ಪಿಲ್ಲ. ಎರಡೂ ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ಬರುತ್ತಾರೆ. ಅಭಿವೃದ್ಧಿ ಕೆಲಸಗಳು ಇನ್ನಷ್ಟು ಚುರುಕಾಗಿ ಆಗುತ್ತವೆ. ಅಧಿಕಾರ ವಿಕೇಂದ್ರೀಕರಣ ಆದಷ್ಟು ಒಳ್ಳೆಯದೇ’ ಎಂದು ಪ್ರತಿಕ್ರಿಯಿಸಿದರು.