<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹೊಳಲು ಗ್ರಾಮದ ಮಲ್ಲಿಕಾರ್ಜುನ ವಿರಕ್ತ ಮಠದಲ್ಲಿ ಗುರುವಾರ ಕಾರ್ತಿಕೋತ್ಸವ ಜರುಗಿತು. ಮಠದ ಚನ್ನಬಸವ ದೇವರ ಸಾನ್ನಿಧ್ಯದಲ್ಲಿ ಮಕ್ಕಳು ದೀಪೋತ್ಸವಕ್ಕೆ ಚಾಲನೆ ನೀಡಿದರು.</p>.<p>‘ದೀಪೋತ್ಸವ ಜ್ಞಾನದ ಸಂಕೇತ. ಬದುಕಿನ ಕತ್ತಲೆ ಕಳೆದು ಬೆಳಕು ಮೂಡಿಸುವ ಮಾರ್ಗವಾಗಿದೆ. ದೇಶ ಕಾಯುವ ಸೈನಿಕ, ಅನ್ನ ನೀಡುವ ರೈತರಿಗೆ ಒಳ್ಳೆಯದಾಗಲೆಂದು ಪ್ರಾರ್ಥಿಸಿ ಎಲ್ಲರೂ ದೀಪಗಳನ್ನು ಬೆಳಗಬೇಕು’ ಎಂದು ಚನ್ನಬಸವ ದೇವರು ಹೇಳಿದರು.</p>.<p>ಹಿರೇಮಲ್ಲನಕೆರೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಮಲ್ಲಿಕಾರ್ಜುನ ಮಠದ ಅಧ್ಯಕ್ಷ ಮಂಜುನಾಥ ಹೊಟ್ಟಿಗೌಡ್ರ ಹಾಗೂ ಗ್ರಾಮದ ಮುಖಂಡರು ಇದ್ದರು. ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವಚನ ಸಂಪನ್ನಗೊಂಡಿತು. ದೇವಸ್ಥಾನ ಆವರಣದಲ್ಲಿ ಭಕ್ತರು ಹಣತೆಗಳನ್ನು ಬೆಳಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹೊಳಲು ಗ್ರಾಮದ ಮಲ್ಲಿಕಾರ್ಜುನ ವಿರಕ್ತ ಮಠದಲ್ಲಿ ಗುರುವಾರ ಕಾರ್ತಿಕೋತ್ಸವ ಜರುಗಿತು. ಮಠದ ಚನ್ನಬಸವ ದೇವರ ಸಾನ್ನಿಧ್ಯದಲ್ಲಿ ಮಕ್ಕಳು ದೀಪೋತ್ಸವಕ್ಕೆ ಚಾಲನೆ ನೀಡಿದರು.</p>.<p>‘ದೀಪೋತ್ಸವ ಜ್ಞಾನದ ಸಂಕೇತ. ಬದುಕಿನ ಕತ್ತಲೆ ಕಳೆದು ಬೆಳಕು ಮೂಡಿಸುವ ಮಾರ್ಗವಾಗಿದೆ. ದೇಶ ಕಾಯುವ ಸೈನಿಕ, ಅನ್ನ ನೀಡುವ ರೈತರಿಗೆ ಒಳ್ಳೆಯದಾಗಲೆಂದು ಪ್ರಾರ್ಥಿಸಿ ಎಲ್ಲರೂ ದೀಪಗಳನ್ನು ಬೆಳಗಬೇಕು’ ಎಂದು ಚನ್ನಬಸವ ದೇವರು ಹೇಳಿದರು.</p>.<p>ಹಿರೇಮಲ್ಲನಕೆರೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಮಲ್ಲಿಕಾರ್ಜುನ ಮಠದ ಅಧ್ಯಕ್ಷ ಮಂಜುನಾಥ ಹೊಟ್ಟಿಗೌಡ್ರ ಹಾಗೂ ಗ್ರಾಮದ ಮುಖಂಡರು ಇದ್ದರು. ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವಚನ ಸಂಪನ್ನಗೊಂಡಿತು. ದೇವಸ್ಥಾನ ಆವರಣದಲ್ಲಿ ಭಕ್ತರು ಹಣತೆಗಳನ್ನು ಬೆಳಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>